ADVERTISEMENT

ಬಾಗಲಕೋಟೆ: ಜಿಲ್ಲೆಯಾದ್ಯಂತ ಬಸ್ ಬಂದ್-ಪ್ರಯಾಣಿಕರ ಪರದಾಟ

​ಪ್ರಜಾವಾಣಿ ವಾರ್ತೆ
Published 7 ಏಪ್ರಿಲ್ 2021, 2:17 IST
Last Updated 7 ಏಪ್ರಿಲ್ 2021, 2:17 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಬಾಗಲಕೋಟೆ: ಜಿಲ್ಲೆಯಲ್ಲಿ ಸಾರಿಗೆ ನೌಕರರ ಮುಷ್ಕರಕ್ಕೆ ಸಂಪೂರ್ಣ ಬೆಂಬಲ ದೊರೆತಿದೆ. ಇಲ್ಲಿನ 9 ಡಿಪೋಗಳಿಂದ ಒಂದೂ ಬಸ್ ಬುಧವಾರ ನಸುಕಿನಿಂದ ರಸ್ತೆಗೆ ಇಳಿಯಲಿಲ್ಲ.

ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ, ನಿರ್ವಾಹಕರು ಕರ್ತವ್ಯಕ್ಕೆ ಹಾಜರಾಗಿಲ್ಲ‌. ಸಿಬ್ಬಂದಿ ಕೆಲಸಕ್ಕೆ ಬರಬಹುದು ಎಂಬ ನಿರೀಕ್ಷೆಯಲ್ಲಿ ಅಧಿಕಾರಿಗಳು ಕಾದು ಕುಳಿತಿದ್ದಾರೆ. ಆದರೆ ಸಿಬ್ಬಂದಿ ನಿಲ್ದಾಣಗಳತ್ತ ಸುಳಿಯುತ್ತಿಲ್ಲ.

ಬಸ್ ನಿಲ್ದಾಣಗಳಿಗೆ ಬೇರೆ ಊರುಗಳಿಂದ ಬಂದ ಪ್ರಯಾಣಿಕರು ಊರಿಗೆ ತೆರಳಲು ಖಾಸಗಿ ವಾಹನಗಳನ್ನೇ‌ ಅವಲಂಬಿಸಬೇಕಿದೆ.

ADVERTISEMENT

ಗೋವಾ ಪಣಜಿಯಿಂದ ಮುಂಜಾನೆ ಬಂದಿಳಿದ ಇಳಕಲ್‌ಗೆ ಹೋಗಬೇಕಿದ್ದ ಕುಟುಂಬವೊಂದು ಬಾಗಲಕೋಟೆ ಬಸ್ ನಿಲ್ದಾಣದಲ್ಲಿಯೇ ಉಳಿದಿದೆ. ಟಂ ಟಂ ಸೇರಿದಂತೆ ಖಾಸಗಿ ವಾಹನಗಳ ಚಾಲಕರು ಊರಿಗೆ ಕರೆದೊಯ್ಯಲು ಹೆಚ್ಚಿನ ಹಣ ಕೇಳುತ್ತಿದ್ದಾರೆ. ಮಕ್ಕಳು-ಮರಿ ಕಟ್ಟಿಕೊಂಡು ಬಂದಿದ್ದೇವೆ. ಏನು ಮಾಡುವುದು ಎಂದು ಕುಟುಂಬದ ಸದಸ್ಯೆ ರೇಖಾ ಅಳಲು ತೋಡಿಕೊಂಡರು.

ಬಾಗಲಕೋಟೆ ಬಸ್ ನಿಲ್ದಾಣದಿಂದ ನಸುಕಿನ ಐದು ಗಂಟೆಯಿಂದ ಕಾರ್ಯಾಚರಣೆ ನಡೆಸಬೇಕಿದ್ದ 16 ಬಸ್‌ಗಳು ರಸ್ತೆಗೆ ಇಳಿಯಲಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.