ADVERTISEMENT

16 ತಿಂಗಳ ನಂತರ ಐಕ್ಯಮಂಟಪ ವೀಕ್ಷಣೆಗೆ ಅವಕಾಶ

​ಪ್ರಜಾವಾಣಿ ವಾರ್ತೆ
Published 3 ಅಕ್ಟೋಬರ್ 2020, 19:46 IST
Last Updated 3 ಅಕ್ಟೋಬರ್ 2020, 19:46 IST
ಬಾಗಲಕೋಟೆ ಜಿಲ್ಲೆ ಹುನಗುಂದ ತಾಲ್ಲೂಕು ಕೂಡಲಸಂಗಮದಲ್ಲಿರುವ ಬಸವಣ್ಣನ ಐಕ್ಯಮಂಟಪ
ಬಾಗಲಕೋಟೆ ಜಿಲ್ಲೆ ಹುನಗುಂದ ತಾಲ್ಲೂಕು ಕೂಡಲಸಂಗಮದಲ್ಲಿರುವ ಬಸವಣ್ಣನ ಐಕ್ಯಮಂಟಪ   

ಕೂಡಲಸಂಗಮ (ಬಾಗಲಕೋಟೆ ಜಿಲ್ಲೆ): ದುರಸ್ತಿ ಕಾರ್ಯದ ಕಾರಣ ಮುಚ್ಚಲಾಗಿದ್ದ ಇಲ್ಲಿನ ಬಸವಣ್ಣನ ಐಕ್ಯ ಮಂಟಪವು ಶನಿವಾರ ಸಾರ್ವಜನಿಕರ ವೀಕ್ಷಣೆಗೆ ಮುಕ್ತವಾಗಿದೆ. ಬರೋಬ್ಬರಿ 16 ತಿಂಗಳ ನಂತರ ಇದು ವೀಕ್ಷಣೆಗೆ ಮುಕ್ತಗೊಂಡಿದೆ.

'₹87 ಲಕ್ಷ ವೆಚ್ಚದಲ್ಲಿ ಐಕ್ಯಮಂಟಪದ ದುರಸ್ತಿ ಕಾರ್ಯ ನಡೆದಿದೆ. ಪ್ರತಿದಿನಬೆಳಿಗ್ಗೆ 6 ರಿಂದ ಸಂಜೆ 6ರವರೆಗೆ ಸಾರ್ವಜನಿಕರ ಭೇಟಿಗೆ ಅವಕಾಶ ನೀಡಲಾಗಿದೆ'ಎಂದು ಕೂಡಲಸಂಗಮ ಅಭಿವೃದ್ಧಿ ಮಂಡಳಿಯ ಆಯುಕ್ತ ಎಂ.ಗಂಗಪ್ಪ 'ಪ್ರಜಾವಾಣಿ'ಗೆ ತಿಳಿಸಿದರು.

ಐಕ್ಯಮಂಟಪದಲ್ಲಿ ಬಿರುಕುಗಳು ಕಂಡು ಬಂದಿದ್ದ ಕಾರಣ ಅದರ ದುರಸ್ತಿಗಾಗಿ 2019 ಮೇ 22 ರಿಂದ ಬಸವಣ್ಣನ ಐಕ್ಯಸ್ಥಳಕ್ಕೆ ಸಾರ್ವಜನಿಕರ ಪ್ರವೇಶವನ್ನು ಕೂಡಲಸಂಗಮ ಅಭಿವೃದ್ಧಿ ಮಂಡಳಿ ನಿಷೇಧಿಸಿತ್ತು. ಆರು ತಿಂಗಳಲ್ಲಿ ಮುಗಿಯಬೇಕಿದ್ದ ದುರಸ್ತಿ ಕಾರ್ಯ ಪ್ರವಾಹ, ಕೊರೊನಾ ಸಂಕಷ್ಟದ ಕಾರಣ ವಿಳಂಬವಾಗಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.