
ಪ್ರಜಾವಾಣಿ ವಾರ್ತೆ
ಲೋಕಾಯುಕ್ತ
ಪ್ರಜಾವಾಣಿ ಚಿತ್ರ
ಬಾಗಲಕೋಟೆ: ಜಿಲ್ಲಾ ಪಂಚಾಯಿತಿ ಸಹಾಯಕ ಕಾರ್ಯದರ್ಶಿ ಎಸ್.ಎಂ. ಕಾಂಬಳೆ ಅವರ ಕಚೇರಿ, ಗದಗ ಜಿಲ್ಲೆ ನರಗುಂದದಲ್ಲಿರುವ ಮನೆ ಮೇಲೆ ಲೋಕಾಯುಕ್ತ ಸಿಬ್ಬಂದಿ ದಾಳಿ ನಡೆಸಿದ್ದು, ಅಂದಾಜು ₹1.07 ಕೋಟಿ ಅಕ್ರಮ ಆಸ್ತಿ ಗಳಿಸಿರುವುದು ಪತ್ತೆಯಾಗಿದೆ ಎಂದು ಲೋಕಾಯುಕ್ತ ಪ್ರಕಟಣೆ ತಿಳಿಸಿದೆ.
ನರಗುಂದದ ರಾಣಿ ಚನ್ನಮ್ಮನಗರದಲ್ಲಿರುವ ಮನೆ, ಅವರ ಸಹೋದರ ಸುರೇಶ ಕಾಂಬಳೆ ಅವರ ಮನೆ ಮೇಲೆ ದಾಳಿ ಮಾಡಿದಾಗ 278 ಗ್ರಾಂ ಚಿನ್ನ, 494 ಗ್ರಾಂ ಬೆಳ್ಳಿ, ಒಂದು ದ್ವಿಚಕ್ರ ವಾಹನ, 15 ನಿವೇಶನ, ಮೂರು ಮನೆಗಳ ದಾಖಲೆಗಳು ಪತ್ತೆಯಾಗಿವೆ.
ಲೋಕಾಯುಕ್ತ ಡಿಎಸ್ಪಿ ಸುರೇಶ ರೆಡ್ಡಿ, ಪೊಲೀಸ್ ನಿರೀಕ್ಷಕ ಎಂ.ಬಿ. ಬಿರಾದಾರ, ಬಿ.ಕೆ. ಮುಕರ್ತಿಹಾಳ, ಪ್ರಭುಲಿಂಗಯ್ಯ ಹಿರೇಮಠ ದಾಳಿ ನಡೆಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.