ADVERTISEMENT

ವೇಮನರ ತತ್ವ ಜಗತ್ತಿಗೆ ಮಾದರಿ: ಸಚಿವ ಎಚ್.ಕೆ.ಪಾಟೀಲ

​ಪ್ರಜಾವಾಣಿ ವಾರ್ತೆ
Published 6 ಆಗಸ್ಟ್ 2024, 12:43 IST
Last Updated 6 ಆಗಸ್ಟ್ 2024, 12:43 IST
ಲೋಕಾಪುರ ಸಮೀಪದ ಮೆಟಗುಡ್ಡ ಗ್ರಾಮದಲ್ಲಿ ಹೇಮರಡ್ಡಿ ಮಲ್ಲಮ್ಮ ದೇವಸ್ದಾನ ಹಾಗೂ ಹೇಮ ವೇಮ ಸಭಾ ಭವನವನ್ನು ಸಚಿವ ಎಚ್.ಕೆ.ಪಾಟೀಲ ಉದ್ಘಾಟಿಸಿದರು
ಲೋಕಾಪುರ ಸಮೀಪದ ಮೆಟಗುಡ್ಡ ಗ್ರಾಮದಲ್ಲಿ ಹೇಮರಡ್ಡಿ ಮಲ್ಲಮ್ಮ ದೇವಸ್ದಾನ ಹಾಗೂ ಹೇಮ ವೇಮ ಸಭಾ ಭವನವನ್ನು ಸಚಿವ ಎಚ್.ಕೆ.ಪಾಟೀಲ ಉದ್ಘಾಟಿಸಿದರು   

ಲೋಕಾಪುರ: ವೇಮನರ ತತ್ವ, ಸಿದ್ಧಾಂತಗಳು ಜಗತ್ತಿಗೆ ಮಾದರಿಯಾಗಿವೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ ಹೇಳಿದರು.

ಸಮೀಪದ ಮೆಟಗುಡ್ಡ ಗ್ರಾಮದಲ್ಲಿ ಹೇಮರಡ್ಡಿ ಮಲ್ಲಮ್ಮ ದೇವಸ್ಧಾನ ಹಾಗೂ ಹೇಮ ವೇಮ ಸಭಾಭವನ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.

ರಚನಾತ್ಮಕ ಕೆಲಸಗಳನ್ನು ಮಾಡುವುದರಿಂದ ಒಳ್ಳೆ ಸಮಾಜ ನಿರ್ಮಾಣ ಸಾಧ್ಯ ಎಂದರು.

ADVERTISEMENT

ಸಚಿವ ಆರ್.ಬಿ.ತಿಮ್ಮಾಪೂರ ಮಾತನಾಡಿ, ಹೇಮರಡ್ಡಿ ಮಲ್ಲಮ್ಮ ಅವರ ವಚನ ಮತ್ತು ಬದುಕನ್ನು ನಾಡಿಗೆ ತಿಳಿಸುವ ಕಾರ್ಯ ನಡೆಯಬೇಕು. ಸಮುದಾಯಗಳ ಮಧ್ಯೆ ಸಮನ್ವಯ ಇದ್ದಾಗ ಮಾತ್ರ ಉತ್ತಮ ಸಮಾಜ ನಿರ್ಮಾಣವಾಗುತ್ತದೆ ಎಂದರು.

ಸಮುದಾಯ ಭವನ ನಿರ್ಮಾಣಕ್ಕೆ ₹10 ಲಕ್ಷ ಅನುದಾನ ನೀಡುವುದಾಗಿ ಸಚಿವ ತಿಮ್ಮಾಪೂರ ಭರವಸೆ ನೀಡಿದರು.

ಸಂಸದ ಗೋವಿಂದ ಕಾರಜೋಳ ಮಾತನಾಡಿ, ಸಮುದಾಯ ಭವನವನ್ನು ಸದುಪಯೋಗಪಡಿಕೊಳ್ಳಬೇಕು ಎಂದರು.

ಶಾಸಕ ಎನ್.ಎಚ್.ಕೋನರಡ್ಡಿ, ವಿಧಾನ ಪರಿಷತ್ ಸದಸ್ಯ ಪಿ.ಎಚ್.ಪೂಜಾರ, ಮಾಜಿ ಸಚಿವರಾದ ಎಸ್.ಆರ್.ಪಾಟೀಲ, ಬಿ.ಆರ್.ಯಾವಗಲ್, ಆರ್.ವಿ.ಪಾಟೀಲ, ಡಿಸಿಸಿ ಬ್ಯಾಂಕ್ ನಿರ್ದೇಶಕ ಆರ್.ಎಸ್.ತಳೇವಾಡ, ಸತೀಶ ಬಂಡಿವಡ್ಡರ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.