ADVERTISEMENT

ತಾಲೂಕು ಕೇಂದ್ರ ಮಾಡಲು ಆಗ್ರಹಿಸಿ ಮಹಾಲಿಂಗಪುರ ಬಂದ್ ಯಶಸ್ವಿ      

​ಪ್ರಜಾವಾಣಿ ವಾರ್ತೆ
Published 17 ಆಗಸ್ಟ್ 2022, 8:40 IST
Last Updated 17 ಆಗಸ್ಟ್ 2022, 8:40 IST
   

ಮಹಾಲಿಂಗಪುರ : ಪಟ್ಟಣವನ್ನು ತಾಲ್ಲೂಕು ಕೇಂದ್ರ ಮಾಡಬೇಕು ಎಂದು ಒತ್ತಾಯಿಸಿ ಬುಧವಾರ ಕರೆ ನೀಡಿದ್ದ ಮಹಾಲಿಂಗಪುರ ಬಂದ್ ಯಶಸ್ವಿಯಾಗಿದೆ.

ಮುಂಜಾನೆ 10 ಗಂಟೆಗೆ ಪಟ್ಟಣದ ಬಸವ ವೃತ್ತದಿಂದ ತಾಲ್ಲೂಕು ಹೋರಾಟ ಸಮಿತಿ ಸದಸ್ಯರು ಹಾಗೂ ಎಲ್ಲಾ ರಾಜಕೀಯ ಪಕ್ಷಗಳ ಮುಖಂಡರು, ವಿವಿಧ ಗ್ರಾಮಗಳಿಂದ ಆಗಮಿಸಿದ್ದ ಮುಖಂಡರು, ಹೋರಾಟಗಾರರು, ರೈತರು ಪಟ್ಟಣದಲ್ಲಿ ಬೃಹತ್ ಮೆರವಣಿಗೆ ಮಾಡಿದರು.

ಸಂಗಾನಟ್ಟಿಯ ಹಲಗೆಮೇಳ, ಮಹಾಲಿಂಗಪುರದ ಡೊಳ್ಳಿನ ಕಲಾವಿದರು ಮೆರವಣಿಗೆಯಲ್ಲಿ ಭಾಗವಹಿಸಿ ಬೆಂಬಲ ಸೂಚಿಸಿದರು.
ಮಹಾಲಿಂಗಪುರ ಬಂದ್ ಬೆಂಬಲಿಸಿ ವ್ಯಾಪಾರಸ್ಥರು ಅಂಗಡಿಗಳನ್ನು ಬಂದ್ ಮಾಡಿದ್ದರು

ADVERTISEMENT

ಬಸ್ ಸಂಚಾರ ಸಂಪೂರ್ಣ ಬಂದ್

ಮುಂಜಾಗ್ರತಾ ಕ್ರಮವಾಗಿ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ. ತಾಲ್ಲೂಕು ರಚನೆಗಾಗಿ 126 ದಿನಗಳಿಂದ ಹೋರಾಟ ನಡೆದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.