ADVERTISEMENT

ಹೇಮರಡ್ಡಿ ಮಲ್ಲಮ್ಮ ದೇವಸ್ಥಾನ ಅಡಿಗಲ್ಲು ಸಮಾರಂಭ

​ಪ್ರಜಾವಾಣಿ ವಾರ್ತೆ
Published 30 ಡಿಸೆಂಬರ್ 2025, 4:14 IST
Last Updated 30 ಡಿಸೆಂಬರ್ 2025, 4:14 IST
ಜಮಖಂಡಿ ವೇಮವಿಕಾಸ ವೇದಿಕೆಯ ಅಡಿಯಲ್ಲಿ ನಿರ್ಮಾಣಗೊಳ್ಳಲಿರುವ ಮಹಾಸಾದ್ವಿ ಹೇಮರಡ್ಡಿ ಮಲ್ಲಮ್ಮನವರ ದೇವಸ್ಥಾನದ ಅಡಿಗಲ್ಲು ಸಮಾರಂಭವನ್ನು ಸಚಿವ ರಾಮಲಿಂಗಾರೆಡ್ಡಿ ಉದ್ಘಾಟಿಸಿದರು
ಜಮಖಂಡಿ ವೇಮವಿಕಾಸ ವೇದಿಕೆಯ ಅಡಿಯಲ್ಲಿ ನಿರ್ಮಾಣಗೊಳ್ಳಲಿರುವ ಮಹಾಸಾದ್ವಿ ಹೇಮರಡ್ಡಿ ಮಲ್ಲಮ್ಮನವರ ದೇವಸ್ಥಾನದ ಅಡಿಗಲ್ಲು ಸಮಾರಂಭವನ್ನು ಸಚಿವ ರಾಮಲಿಂಗಾರೆಡ್ಡಿ ಉದ್ಘಾಟಿಸಿದರು   

ಜಮಖಂಡಿ: ಮಹಾಸಾದ್ವಿ ಹೇಮರಡ್ಡಿ ಮಲ್ಲಮ್ಮ ದೇವಸ್ಥಾನ ನಿರ್ಮಾಣಕ್ಕೆ ಮುಜರಾಯಿ ಇಲಾಖೆಯಿಂದ ₹ 50 ಲಕ್ಷ ಅನುದಾನ ನೀಡಲಾಗುವುದು ಎಂದು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.

ನಗರದ ಹೊರವಲಯದ ಕುಂಚನೂರ ಆರ್‌ಸಿಯಲ್ಲಿನ ಹೇಮರಡ್ಡಿ ಮಲ್ಲಮ್ಮ ಸಮುದಾಯ ಭವನದ ಆವರಣದಲ್ಲಿ ವೇಮವಿಕಾಸ ವೇದಿಕೆಯ ಆಶ್ರಯದಲ್ಲಿ ಸೋಮವಾರ ನಡೆದ ಮಹಾಸಾದ್ವಿ ಹೇಮರಡ್ಡಿ ಮಲ್ಲಮ್ಮ ದೇವಸ್ಥಾನ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.

ಮಹಾಸಾಧ್ವಿ ಹೇಮರಡ್ಡಿ ಮಲ್ಲಮ್ಮ ಸಮುದಾಯ ಭವನ ಎಲ್ಲ ಸಮುದಾಯಗಳಿಗೂ ಅನುಕೂಲವಾಗುತ್ತಿದೆ. ಹಾಗೇ ದೇವಸ್ಥಾನ ಎಲ್ಲ ಸಮುದಾಯಕ್ಕೂ ಅನುಕೂಲವಾಗಬೇಕು ಎಂದರು.

ADVERTISEMENT

ಶಾಸಕ ಜಗದೀಶ ಗುಡಗುಂಟಿ ಮಾತನಾಡಿ, ವೈಯಕ್ತಿಕವಾಗಿ ₹ 2 ಲಕ್ಷ ಹಾಗೂ ಶಾಸಕರ ನಿಧಿಯಿಂದ ₹ 5 ಲಕ್ಷ ಅನುದಾನ ನೀಡುತ್ತೇನೆ, ಹೇಮರಡ್ಡಿ ಮಲ್ಲಮ್ಮ ಸಮುದಾಯ ಭವನದಲ್ಲಿ ನಡೆಯುವ ವಿವಾಹಗಳ ನೂತನ ದಂಪತಿಗೆ ನಮಸ್ಕರಿಸಲು ದೇವಾಲಯ ಅತ್ಯವಶ್ಯಕವಾಗಿತ್ತು. ಈಗ ಹೇಮರಡ್ಡಿ ಮಲ್ಲಮ್ಮನವರ ದೇವಸ್ಥಾನ ನಿರ್ಮಿಸುತ್ತಿರುವುದು ಒಳ್ಳೆಯ ಸಂಗತಿ ಎಂದರು.

ಮಾಜಿ ಸಚಿವ ಎಸ್.ಆರ್. ಪಾಟೀಲ ಮಾತನಾಡಿ, ರಡ್ಡಿ ಸಮಾಜದವರ ಕೈ ಆಕಾಶದ ಕಡೆಗೆ ಇರವುದಿಲ್ಲ ಬದಲಾಗಿ ಭೂಮಿಯ ಕಡೆಗೆ ಇರುತ್ತವೆ. ಸಮಾಜ ಆರ್ಥಿಕವಾಗಿ, ಶೈಕ್ಷಣಿಕವಾಗಿ ಹಾಗೂ ರಾಜಕೀಯವಾಗಿ ಮುಂದೆ ಬಂದಿದೆ. ಹೇಮರಡ್ಡಿ ಮಲ್ಲಮ್ಮನವರ ಆದರ್ಶಗಳು ಕೇವಲ ಸಮಾಜಕ್ಕಲ್ಲದೆ ಇಡೀ ವಿಶ್ವದ ಮಹಿಳೆಯರಿಗೆ ಸಿಕ್ಕ ಅನರ್ಘ್ಯ ರತ್ನ. ಅವರು ಸಾತ್ವಿಕ ಗುಣಗಳನ್ನು ಹೊಂದಿದ ಆದರ್ಶ ಮಹಿಳೆ. ಅವರ ಆದರ್ಶಗಳನ್ನು ಎಲ್ಲ ಮಹಿಳೆಯರು ಮೈಗೂಡಿಸಿಕೊಳ್ಳಬೇಕು ಎಂದರು.

ಮಾಜಿ ಶಾಸಕ ಆನಂದ ನ್ಯಾಮಗೌಡ ಮಾತನಾಡಿದರು.

ಹೇಮರಡ್ಡಿ ಮಲ್ಲಮ್ಮನವರ ಸುಪ್ರಭಾತದ ಧ್ವನಿಸುರಳಿ ಹಾಗೂ ತಾಲ್ಲೂಕಿನ ಸಮಾಜ ಬಾಂಧವರ ಜನಗಣತಿ ವರದಿಯನ್ನು ಬಿಡುಗಡೆ ಮಾಡಲಾಯಿತು.

ಮಾಜಿ ಶಾಸಕ ಶ್ರೀಕಾಂತ ಕುಲಕರ್ಣಿ, ರಡ್ಡಿ ಜನಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್. ಶೇಖರ ರೆಡ್ಡಿ ಮಾತನಾಡಿದರು. ವೇದಿಕೆಯಲ್ಲಿ ರೆಡ್ಡಿ ಗುರುಪೀಠದ ವೇಮನಾನಂದ ಶ್ರೀಗಳು, ಚಿನಗುಂಡಿ ಲಕ್ಕಮ್ಮತಾಯಿ, ವಿಧಾನ ಪರಿಷತ್ ಸದಸ್ಯ ಹಣಮಂತ ನಿರಾಣಿ, ಮಾಜಿವಿಧಾನ ಪರಿಷತ ಸದಸ್ಯ ಜಿ.ಎಸ್. ನ್ಯಾಮಗೌಡ, ಶಿವನಗೌಡ ಪಾಟೀಲ, ರಾಮನಗೌಡ ಚಿಕ್ಕನಗೌಡರ, ಡಾ.ಜಿ.ವಿ. ಉದಪುಡಿ, ಎಲ್.ಆರ್. ಉದಪುಡಿ, ಕೃಷ್ಣಾರೆಡ್ಡಿ, ಕುಮಾರ ಪಾಟೀಲ ಇದ್ದರು.

ಸರಸ್ವತಿ ಸಬರದ ಪ್ರಾರ್ಥಿಸಿದರು, ವೇಮ ವಿಕಾಸ ವೇದಿಕೆಯ ತಾಲ್ಲೂಕಾ ಅಧ್ಯಕ್ಷ ಡಾ.ಆರ್.ಎನ್. ಸೋನವಾಲ್ಕರ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಶ್ವೇತಾ ಕಲ್ಲೂರ, ಆರ್.ಕೆ ಪಾಟೀಲ್ ನಿರೂಪಿಸಿದರು. ವಕೀಲ ಆರ್.ಕೆ ಪಾಟೀಲ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.