ADVERTISEMENT

ಮುಖ್ಯಮಂತ್ರಿಯಾಗಲು ಕಾಯಬೇಕು: ಸತೀಶ ಜಾರಕಿಹೊಳಿ

​ಪ್ರಜಾವಾಣಿ ವಾರ್ತೆ
Published 5 ನವೆಂಬರ್ 2023, 12:47 IST
Last Updated 5 ನವೆಂಬರ್ 2023, 12:47 IST
<div class="paragraphs"><p>ಸಚಿವ ಸತೀಶ ಜಾರಕಿಹೊಳಿ</p></div>

ಸಚಿವ ಸತೀಶ ಜಾರಕಿಹೊಳಿ

   

ಬಾಗಲಕೋಟೆ: ‘ಮುಖ್ಯಮಂತ್ರಿ ಆಗಲು ಕಾಯಬೇಕಾಗುತ್ತದೆ. ಸಮಯ ಕೂಡಿ ಬಂದಾಗ ಮಾತ್ರ ಸಾಧ್ಯ’ ಎಂದು ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಈ ಕುರಿತು ನಿರ್ಣಯ ಕೈಗೊಳ್ಳಲು ಪಕ್ಷ, ಶಾಸಕರಿದ್ದಾರೆ. ಪಕ್ಷದ ತೀರ್ಮಾನ ಬಹಳ ಮುಖ್ಯ’ ಎಂದರು.

ADVERTISEMENT

‘ನನಗೆ ಯಾವುದೇ ರೀತಿಯ ಅಸಮಾಧಾನ ಆಗಿಲ್ಲ. ಪಕ್ಷದೊಳಗೆ ಯಾರಿಗಾದರೂ ಅಸಮಾಧಾನವಿದ್ದರೆ ಮಾತುಕತೆ ಮೂಲಕ ಬಗೆಹರಿಸಲಾಗುವುದು’ ಎಂದು ಹೇಳಿದರು.

ಮುಂದಿನ ಐದು ವರ್ಷ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿರುತ್ತಾರೆಯೇ ಎಂಬ ಪ್ರಶ್ನೆಗೆ, ‘ಅವರೇ ಈ ಬಗ್ಗೆ ಈಗಾಗಲೇ ಹೇಳಿದ್ದಾರಲ್ಲ. ಕಾದು ನೋಡೋಣ’ ಎಂದರು.

ನಿಮ್ಮನ್ನು ಮಹಾರಾಷ್ಟ್ರದ ಅಜಿತ್ ಪವಾರ್‌ಗೆ ಹೋಲಿಸಲಾಗುತ್ತಿದೆಯೆಲ್ಲ ಎಂಬ ಪ್ರಶ್ನೆಗೆ, ಪಕ್ಷದಲ್ಲಿ ಎಲ್ಲರೂ ಒಗ್ಗಟ್ಟಾಗಿದ್ದೇವೆ. ಮಹಾರಾಷ್ಟ್ರದ ಸ್ಥಿತಿ ಇಲ್ಲಿ ಬರಲ್ಲ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.