ಬಾಗಲಕೋಟೆ: 'ಎಪಿಎಂಸಿ ಬಿಲ್, ರೈತರ ಬಿಲ್ನಂತಹ ಕಾಯ್ದೆಗಳನ್ನು ಸುಲಭವಾಗಿ ಪಾಸ್ ಮಾಡಿಕೊಳ್ಳಲು ವಿಧಾನಪರಿಷತ್ನಲ್ಲಿ ಹೆಚ್ಚಿನ ಸ್ಥಾನ ಪಡೆಯಬೇಕಿದೆ. ಹೀಗಾಗಿ ಬಿಜೆಪಿ ಅಭ್ಯರ್ಥಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಗೆಲ್ಲಿಸುವಂತೆ' ಸಾರಿಗೆ ಸಚಿವ ಬಿ.ಶ್ರೀರಾಮುಲು ಮನವಿ ಮಾಡಿದರು.
ವಿಧಾನಪರಿಷತ್ ಚುನಾವಣೆ ಹಿನ್ನಲೆಯಲ್ಲಿ ಶನಿವಾರ ಇಲ್ಲಿ ಬಿಜೆಪಿಯಿಂದ ಆಯೋಜಿಸಿದ್ದ ಜನಸ್ವರಾಜ್ ಸಮಾವೇಶದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಕಾಂಗ್ರೆಸ್ ಪಕ್ಷ ಇಂದು ಯಾರಿಗೂ ಬೇಡವಾದ ಪಕ್ಷ. ಸಮರ್ಥ ನಾಯಕತ್ವವೂ ಇಲ್ಲದ ಪಕ್ಷ ಎಂದು ವ್ಯಂಗ್ಯವಾಡಿದ ಶ್ರೀರಾಮುಲು, ಕಾಂಗ್ರೆಸ್ ಮುಕ್ತ ಕರ್ನಾಟಕ ಮಾಡಲು 2023ರವರೆಗೆ ಕಾಯುವ ಅಗತ್ಯವಿಲ್ಲ. ಈ ಬಾರಿಯ ವಿಧಾನ ಪರಿಷತ್ ಚುನಾವಣೆಯಲ್ಲಿಯೇ ಕಾಂಗ್ರೆಸ್ನ ಬಂಡೆ ಒಡೆಯೋಣ ಎಂದರು.
ರಾಜ್ಯದಲ್ಲಿ ಬಿಜೆಪಿ ಅಲೆ ಸ್ಪಷ್ಟವಾಗಿ ಕಾಣುತ್ತಿದೆ. ಹೀಗಾಗಿ ವಿಧಾನಪರಿಷತ್ನ 25 ಸ್ಥಾನಗಳಿಗೆ ನಡೆಯುವ ಚುನಾವಣೆಯಲ್ಲಿ 15 ಸ್ಥಾನಗಳನ್ನು ನಿಶ್ಚಿತವಾಗಿಯೂ ಬಿಜೆಪಿ ಗೆಲ್ಲಲಿದೆ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.