ADVERTISEMENT

ಪರಿಷತ್‌ ಚುನಾವಣೆ: ಎಸ್.ಆರ್.ಪಾಟೀಲ ಕೈತಪ್ಪಿದ ಟಿಕೆಟ್; ಬೆಂಬಲಿಗರ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 22 ನವೆಂಬರ್ 2021, 16:12 IST
Last Updated 22 ನವೆಂಬರ್ 2021, 16:12 IST
ಎಸ್.ಆರ್. ಪಾಟೀಲ
ಎಸ್.ಆರ್. ಪಾಟೀಲ   

ಬಾಗಲಕೋಟೆ: ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ ಅವರಿಗೆ ಕಾಂಗ್ರೆಸ್ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಅವರ ಬೆಂಬಲಿಗರು ಸ್ವಗ್ರಾಮ ಬೀಳಗಿ ತಾಲ್ಲೂಕಿನ ಬಾಡಗಂಡಿಯಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

ಈ ವೇಳೆ ಬೀಳಗಿ ತಾಲ್ಲೂಕು ಘಟಕ ಹಾಗೂ ಬ್ಲಾಕ್ ಕಾಂಗ್ರೆಸ್ ಘಟಕ, ಪಟ್ಟಣ ಪಂಚಾಯತಿ ಸದಸ್ಯರ ಸಾಮೂಹಿಕ ರಾಜೀನಾಮೆ ಬೆದರಿಕೆ ಹಾಕಿದರು.

ಬಾಡಗಂಡಿಯಲ್ಲಿರುವ ಎಸ್.ಆರ್. ಪಾಟೀಲ್ ಒಡೆತನದ ಶಿಕ್ಷಣ ಸಂಸ್ಥೆಯಲ್ಲಿ ಸೇರಿದ ಬೆಂಬಲಿಗರು ಪಕ್ಷದ ವಿರುದ್ದ್ ತಮ್ಮ ಪ್ರತಿಭಟನೆ ದಾಖಲಿಸಿದರು.

ADVERTISEMENT

ನಾಲ್ಕು ಬಾರಿ ವಿಧಾನ ಪರಿಷತ್ ಸದಸ್ಯರಾಗಿ, ವಿರೋಧ ಪಕ್ಷದ ನಾಯಕರಾಗಿ, ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಸೇವೆ ಸಲ್ಲಿಸಿದ ಅನುಭವ ಇರುವ ಎಸ್.ಆರ್ ಪಾಟೀಲ್ ಅವರಿಗೆಕಾಂಗ್ರೆಸ್ ಪಕ್ಷ ಅಪಮಾನ ಮಾಡಿದೆ ಎಂದು ಆರೋಪಿಸಿದರು.

ಪಕ್ಷದ ಹೈಕಮಾಂಡ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.