ADVERTISEMENT

ಕ್ಷುಲ್ಲಕ ಕಾರಣಕ್ಕೆ ಜಗಳ: ಕಲ್ಲಿನಿಂದ ಜಜ್ಜಿ ವ್ಯಕ್ತಿ ಕೊಲೆ

​ಪ್ರಜಾವಾಣಿ ವಾರ್ತೆ
Published 1 ಮೇ 2022, 2:54 IST
Last Updated 1 ಮೇ 2022, 2:54 IST
ರಮೇಶ
ರಮೇಶ   

ಜಮಖಂಡಿ: ಇಲ್ಲಿನ ವೈನ್‌ಶಾಪ್‌ವೊಂದರಲ್ಲಿ ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಜಗಳ ವಿಕೋಪಕ್ಕೆ ತಿರುಗಿ ಮಧುರಖಂಡಿ ಗ್ರಾಮದ ರಮೇಶ ಭೀಮಪ್ಪ ಕವಟಗಿ ಎಂಬುವರನ್ನು ಕೊಲೆಯಲ್ಲಿ ಅಂತ್ಯವಾದ ಘಟನೆ ನಡೆದಿದೆ.

ನಗರದ ಹೊರವಲಯದಲ್ಲಿ ಶವ ಪತ್ತೆಯಾಗಿದೆ. ಶುಕ್ರವಾರ ರಾತ್ರಿ ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ್ದಾರೆ. ಈ ಬಗ್ಗೆ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಸಿಪಿಐ ಈರಯ್ಯ ಮಠಪತಿ, ಪಿಎಸ್‌ಐ ವಸಂತ ಬಂಡಗಾರ ಭೇಟಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT