ADVERTISEMENT

ನಾಟಕ, ಸಂಗೀತ ನಿರ್ದೇಶಕ ವೆಂಕಟೇಶ ಕುಲಕರ್ಣಿ ನಿಧನ

​ಪ್ರಜಾವಾಣಿ ವಾರ್ತೆ
Published 20 ಡಿಸೆಂಬರ್ 2020, 2:28 IST
Last Updated 20 ಡಿಸೆಂಬರ್ 2020, 2:28 IST
ವೆಂಕಟೇಶ ಕುಲಕರ್ಣಿ
ವೆಂಕಟೇಶ ಕುಲಕರ್ಣಿ   

ಬಾದಾಮಿ: ತಾಲ್ಲೂಕಿನ ಹೆಬ್ಬಳ್ಳಿ ಗ್ರಾಮದ ಹವ್ಯಾಸಿ ಮತ್ತು ವೃತ್ತಿ ರಂಗಭೂಮಿ ನಾಟಕಗಳ ನಿರ್ದೇಶಕ ಹಾಗೂ ಸಂಗೀತಕಾರ ವೆಂಕಟೇಶ ಕುಲಕರ್ಣಿ (82) ಶನಿವಾರ ನಿಧನರಾದರು.

ಅವರಿಗೆ ಪತ್ನಿ, ಇಬ್ಬರು ಪುತ್ರ, ಇಬ್ಬರು ಪುತ್ರಿ ಇದ್ದಾರೆ.

ಭಾರತೀಯ ಸೇನೆಯಲ್ಲಿ ಕೆಲ ವರ್ಷಗಳವರೆಗೆ ಕಾರ್ಯ ನಿರ್ವಹಿಸಿ ಮರಳಿ ಬಂದ ನಂತರ ನಾಟಕಗಳಲ್ಲಿ ಕೆಲಸ ಮಾಡಿದರು. ನಾಟಕಗಳ ನಿರ್ದೇಶನದ ಜೊತೆಗೆ ಹಾರ್ಮೋನಿಯಂ ನುಡಿಸುವುದು ಹಾಗೂ ಸಂಗೀತ ನಿರ್ದೇಶನ ಕೂಡ ಮಾಡಿದ್ದರು. ಇವರು ನಿರ್ದೇಶಿಸಿದ ರಕ್ತರಾತ್ರಿ, ಗದಾಯುದ್ಧ ಮತ್ತು ಕುರುಕ್ಷೇತ್ರ ನಾಟಕಗಳಿಗೆ ರಾಜ್ಯ ಮಟ್ಟದ ಪ್ರಶಸ್ತಿಗಳು ಸಂದಿವೆ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ, ನಾಟಕ ಅಕಾಡೆಮಿ ಪ್ರಶಸ್ತಿ, ನಮ್ಮೂರ ಸಾಧಕರು ಮತ್ತು ಚಾಲುಕ್ಯ ಸಿರಿ ಪ್ರಶಸ್ತಿ ಇವರಿಗೆ ಲಭಿಸಿವೆ. ಕಲಾವಿದರ ಶ್ರೇಯೋಭಿವೃದ್ಧಿಗೆ ತಾಲ್ಲೂಕು ಮಟ್ಟದ ಕಲಾವಿದರ ಬಳಗವನ್ನು ಸಂಘಟಿಸಿ ಅನೇಕ ಕಾರ್ಯಕ್ರಮಗಳನ್ನು ರೂಪಿಸಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.