ADVERTISEMENT

ರಾಷ್ಟ್ರಗೀತೆ, ರಾಷ್ಟ್ರ ಧ್ವಜ ಮಾಹಿತಿ ಕಾರ್ಯಾಗಾರ ಇಂದು

​ಪ್ರಜಾವಾಣಿ ವಾರ್ತೆ
Published 7 ಆಗಸ್ಟ್ 2023, 19:14 IST
Last Updated 7 ಆಗಸ್ಟ್ 2023, 19:14 IST

ಗುಳೇದಗುಡ್ಡ: ಸೇವಾದಳ ಬಾಗಲಕೋಟೆ, ಗುರುಸಿದ್ದೇಶ್ವರ ಮಹಿಳಾ ಶಿಕ್ಷಣ ಮಹಾವಿದ್ಯಾಲಯದ ಆಶ್ರಯದಲ್ಲಿ ರಾಷ್ಟ್ರಗೀತೆ, ರಾಷ್ಟ್ರಧ್ವಜ ಮಾಹಿತಿ ಕಾರ್ಯಾಗಾರ ಆ.8ರಂದು ಬೆಳಿಗ್ಗೆ 10 ಗಂಟೆಗೆ ಪಟ್ಟಣದ ಗುರುಸಿದ್ದೇಶ್ವರ ಮಹಿಳಾ ಶಿಕ್ಷಣ ಮಹಾವಿದ್ಯಾಲಯದ ಸಭಾಭವನದಲ್ಲಿ ಜರುಗಲಿದೆ.

ಭಾರತ ಸೇವಾ ದಳದ ಜಿಲ್ಲಾ ಸಂಘಟಕರಾದ ಮಹೇಶ ಪತ್ತಾರ ಕಾರ್ಯಕ್ರಮ ಉದ್ಘಾಟಿಸುವರು. ಗುರುಸಿದ್ದೇಶ್ವರ ಮಠದ ಗುರುಬಸವ ದೇವರು ಸಾನ್ನಿಧ್ಯ ವಹಿಸುವರು. ಕೇಂದ್ರ ಸಮಿತಿ ಸದಸ್ಯರಾದ ವಿಶ್ವನಾಥ ಪಾಟೀಲ, ಜಿಲ್ಲಾ ಸ,ಇತಿ ಸದಸ್ಯರಾದ ರವೀಂದ್ರ ಪಾಗಿ, ಕಾರ್ಯದರ್ಶಿ ಎನ್.ಆರ್.ಜಿನ್ನೂರ ಉಪಸ್ಥಿತರಿರುವರು ಎಂದು ಸೇವಾದಳ ಪದಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT