ADVERTISEMENT

‘ಸಂವಿಧಾನ ಬದಲಾಯಿಸಲು ಸಾಧ್ಯವಿಲ್ಲ’-ಡಾ.ಎ.ಆರ್‌.ಬೆಳಗಲಿ

ಸಂವಿಧಾನದ ಉಳಿವಿಗೆ ಜನಜಾಗೃತಿ ವಿಚಾರ ಸಂಕಿರಣ

​ಪ್ರಜಾವಾಣಿ ವಾರ್ತೆ
Published 28 ಏಪ್ರಿಲ್ 2022, 16:24 IST
Last Updated 28 ಏಪ್ರಿಲ್ 2022, 16:24 IST
ಬನಹಟ್ಟಿಯಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಆಶ್ರಯದಲ್ಲಿ ಸಂವಿಧಾನದ ಉಳಿವಿಗಾಗಿ ಜನಜಾಗೃತಿ ಕಾರ್ಯಕ್ರಮದಲ್ಲಿ ಗಣ್ಯರು ಭಾಗವಹಿಸಿದ್ದರು
ಬನಹಟ್ಟಿಯಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಆಶ್ರಯದಲ್ಲಿ ಸಂವಿಧಾನದ ಉಳಿವಿಗಾಗಿ ಜನಜಾಗೃತಿ ಕಾರ್ಯಕ್ರಮದಲ್ಲಿ ಗಣ್ಯರು ಭಾಗವಹಿಸಿದ್ದರು   

ರಬಕವಿ ಬನಹಟ್ಟಿ: ಭಾರತ ದೇಶದ ಸಂವಿಧಾನ ಕೇವಲ ದಲಿತರಿಗೆ ಮಾತ್ರ ಸಿಮೀತವಾಗಿಲ್ಲ. ಅದು ದೇಶದ ಎಲ್ಲ ನಾಗರಿಕರಿಗೆ ಸಮಾನವಾಗಿ ಬದುಕುವ ಅವಕಾಶವನ್ನು ನೀಡಿದೆ ಎಂದು ಮಹಾಲಿಂಗಪುರದ ಡಾ.ಎ.ಆರ್‌.ಬೆಳಗಲಿ ತಿಳಿಸಿದರು.

ಅವರು ಗುರುವಾರ ಸ್ಥಳೀಯ ಸಿದ್ಧರಾಮೇಶ್ವರ ಕಲ್ಯಾಣ ಮಂಟಪದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಹಮ್ಮಿಕೊಂಡಿದ್ದ ಸಂವಿಧಾನದ ಉಳಿವಿಗಾಗಿ ಜನಜಾಗೃತಿ ವಿಚಾರ ಸಂಕಿರಣ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸ್ಥಳೀಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯಾಸಕ ಡಾ.ಧರ್ಮಣ್ಣ ಕಾಂಬಳೆ ಮಾತನಾಡಿ, ನಾವು ಸಂವಿಧಾನವನ್ನು ರಕ್ಷಣೆ ಮಾಡಿದರೆ ಅದು ನಮ್ಮನ್ನು ರಕ್ಷಣೆ ಮಾಡುತ್ತದೆ. ಪ್ರತಿಯೊಬ್ಬ ಭಾರತೀಯರು ಅಂಬೇಡ್ಕರ್ ಅವರಿಂದ ರಚಿಸಲ್ಪಟ್ಟ ಸಂವಿಧಾನವನ್ನು ಗೌರವಿಸಬೇಕು ಮತ್ತು ಅದರ ಆಶಯದಂತೆ ನಡೆದುಕೊಳ‍್ಳಬೇಕು. ಸಂವಿಧಾನ ರಕ್ಷಣೆಯಲ್ಲಿ ಮಹಿಳೆಯರ ಪಾತ್ರವೂ ಕೂಡಾ ಮುಖ್ಯವಾಗಿದೆ. ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಸಂವಿಧಾನದ ಪಾತ್ರ ಬಹಳಷ್ಟು ಮುಖ್ಯವಾಗಿದೆ. ಇಂದಿನ ದಿನಗಳಲ್ಲಿ ಸಂವಿಧಾನದ ಅರಿವನ್ನು ನಾವು ಪ್ರತಿಯೊಬ್ಬರಲ್ಲಿ ಬಿತ್ತಬೇಕಾಗಿದೆ ಎಂದರು.

ADVERTISEMENT

ಸಂಘಟನೆಯ ಜಿಲ್ಲಾ ಘಟಕದ ಸಂಚಾಲಕ ಪರಶುರಾಮ ಕಾಂಬಳೆ, ರಬಕವಿ ಬನಹಟ್ಟಿ ತಾಲ್ಲೂಕಿನ ಸಂಚಾಲಕ ಬಸವರಾಜ ದೊಡಮನಿ, ಬಿಡಿಸಿಸಿ ಬ್ಯಾಂಕ್ ಮಾಜಿ ನಿರ್ದೇಶಕ ಭೀಮಶಿ ಮಗದುಮ್. ವಕೀಲ ಶಶಿಕಾಂತ ದೊಡಮನಿ ಮಾತನಾಡಿದರು. ಮಹೇಶ ಗೊಂಬಿಗುಡ್ಡ, ಬಸವರಾಜ ಹಳ್ಳದಮನಿ, ರಮೇಶ ಅನಗವಾಡಿ, ಬಸವರಾಜ ಪಾತ್ರೋಟ, ಕಾಶೀಂಅಲಿ ಗೋಠೆ, ಎಚ್.ಎನ್.ನೀಲನಾಯಕ, ಸದಾಶಿವ ಐನಾಪುರ, ಮುತ್ತು ಹರಿಜನ, ಯಲ್ಲಪ್ಪ ಕಾಂಬಳೆ, ವಿಠ್ಠಲ ಸಿಂಗೆ, ರಾಜು ಪೋಳ, ರಮೇಶ ಮಾಂಗ, ಪರಸು ಕಾಂಬಳೆ, ಸೇರಿದಂತೆ ಅನೇಕರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.