ADVERTISEMENT

ಮಕ್ಕಳ ಮೇಲೆ ಪಾಲಕರು ನಿಗಾ ವಹಿಸಿ: ಕಮರಿಮಠದ ಶರಣಬಸವದೇವರು

​ಪ್ರಜಾವಾಣಿ ವಾರ್ತೆ
Published 20 ಜೂನ್ 2025, 14:24 IST
Last Updated 20 ಜೂನ್ 2025, 14:24 IST
ತೇರದಾಳ ತಾಲ್ಲೂಕಿನ ಹಳಿಂಗಳಿಯ ಕಮರೀಮಠದ ಶರಣಬಸವೇಶ್ವರ ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಕ್ಕಳಿಗೆ ಶ್ರೀಮಠದ ಶಿವಾನಂದ ಶ್ರೀ ಅಕ್ಷರಾಭ್ಯಾಸ ಮಾಡಿಸಿದರು 
ತೇರದಾಳ ತಾಲ್ಲೂಕಿನ ಹಳಿಂಗಳಿಯ ಕಮರೀಮಠದ ಶರಣಬಸವೇಶ್ವರ ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಕ್ಕಳಿಗೆ ಶ್ರೀಮಠದ ಶಿವಾನಂದ ಶ್ರೀ ಅಕ್ಷರಾಭ್ಯಾಸ ಮಾಡಿಸಿದರು    

ತೇರದಾಳ: ‘ಮಕ್ಕಳ ಭವಿಷ್ಯ ಉಜ್ವಲವಾಗಬೇಕೆಂದರೆ ಅಕ್ಷರಾಭ್ಯಾಸದ ಮೂಲಕ ನಮ್ಮ ಸಂಸ್ಕೃತಿಯ ಸ್ಪರ್ಶ ನೀಡಬೇಕಿದೆ’ ಎಂದು ಕಮರಿಮಠದ ಶರಣಬಸವದೇವರು ಹೇಳಿದರು.

ತಾಲ್ಲೂಕಿನ ಹಳಿಂಗಳಿ ಕಮರಿಮಠದ ಆಶ್ರಯದಲ್ಲಿ ನಡೆಯುವ ಶರಣಬಸವೇಶ್ವರ ಪ್ರಾಥಮಿಕ ಶಾಲಾ ಮಕ್ಕಳಿಗೆ ಶುಕ್ರವಾರ ಹಮ್ಮಿಕೊಂಡ ಅಕ್ಷರಾಭ್ಯಾಸ ಕಾರ್ಯಕ್ರಮದಲ್ಲಿ ಸಾಂಪ್ರದಾಯಿಕ ಪದ್ಧತಿ ನೆರವೇರಿಸಿ, ಅವರು ಆಶೀರ್ವಚನ ನೀಡಿದರು.

‘ಪಾಲಕರು ಮಕ್ಕಳ ಶೈಕ್ಷಣಿಕ ಚಟುವಟಿಕೆ ಸೇರಿದಂತೆ ಅವರ ಬೆಳವಣಿಗೆಯ ಮೇಲೂ ಸದಾ ನಿಗಾವಹಿಸಿ, ಅವರಿಗೆ ಉತ್ತಮ ಸಂಸ್ಕಾರ ರೂಢಿಸಬೇಕು’ ಎಂದರು.

ADVERTISEMENT

ಇದೇ ಸಂದರ್ಭದಲ್ಲಿ ಪೀಠಾಧಿಪತಿ ಶಿವಾನಂದ ಶ್ರೀ ಮಕ್ಕಳಿಗೆ ಅಕ್ಷರ ಬರೆಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಪಾಲಕರು ದಂಪತಿಸಮೇತ ಬಿಳಿಧರಿಸಿನಲ್ಲಿ ಆಗಮಿಸಿ, ತಮ್ಮ ಮಕ್ಕಳ ಅಕ್ಷರಾಭ್ಯಾಸದಲ್ಲಿ ಭಾಗಿಯಾಗಿದ್ದು ವಿಶೇಷವಾಗಿತ್ತು. ಮುಖ್ಯಗುರು ಸೋಮಶೇಖರ ಜಿ.ಎಸ್ ಸೇರಿದಂತೆ ಶಿಕ್ಷಕರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.