ADVERTISEMENT

ಅನೈತಿಕ ಸಂಬಂಧದ ಅನುಮಾನ: ತಂದೆ, ಪತ್ನಿಯನ್ನೇ ಕೊಂದು ಆರೋಪಿ ಪರಾರಿ

​ಪ್ರಜಾವಾಣಿ ವಾರ್ತೆ
Published 6 ಅಕ್ಟೋಬರ್ 2019, 19:18 IST
Last Updated 6 ಅಕ್ಟೋಬರ್ 2019, 19:18 IST

ಇಂಡಿ: ತಾಲ್ಲೂಕಿನ ಖೇಡಗಿ ಗ್ರಾಮದ ಕ್ರಾಸ್‌ ಬಳಿಯ ತೋಟದಲ್ಲಿ ಭಾನುವಾರ ವ್ಯಕ್ತಿಯೊಬ್ಬ ತನ್ನ ಪತ್ನಿ ಮತ್ತು ತಂದೆಯ ಕೊಲೆ ಮಾಡಿದ್ದಾನೆ.

ತಾಲ್ಲೂಕಿನ ಶಿರೂರ ಗ್ರಾಮದ ಮಾಳಪ್ಪ ಧರ್ಮಣ್ಣ ಪೂಜಾರಿ (65), ರೇಣುಕಾ ಪುಟ್ಟಣ್ಣ ಪೂಜಾರ (35) ಕೊಲೆಯಾದವರು. ಬೆಳಗಿನ ಜಾವ ಮಲಗಿದ್ದಾಗ, ಕೊಡಲಿಯಿಂದ ತಲೆಗೆ ಹೊಡೆದು ಕೊಲೆ ಮಾಡಿದ ಪುಟ್ಟಣ್ಣ ಮಾಳಪ್ಪ ಪೂಜಾರಿ ತಲೆಮರೆಸಿಕೊಂಡಿದ್ದಾನೆ.

ಕೊಲೆಯಾದ ಇಬ್ಬರೂ ಕೆಲ ದಿನಗಳ ಹಿಂದೆ ಖೇಡಗಿ ಗ್ರಾಮದ ಶ್ರೀಶೈಲ ಸೊನ್ನ ಎಂಬುವವರ ಜಮೀನಲ್ಲಿ ದುಡಿಯಲು ಬಂದಿದ್ದರು. ತಂದೆ ಮತ್ತು ಪತ್ನಿಯ ನಡುವೆ ಅನೈತಿಕ ಸಂಬಂಧ ಇತ್ತು ಎಂಬ ಅನುಮಾನದಿಂದ ಆರೋಪಿ ಈ ಕೃತ್ಯ ಎಸಗಿದ್ದಾನೆ ಎಂದು ಇಂಡಿ ಪೊಲೀಸರು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.