ADVERTISEMENT

ರಾಘವೇಂದ್ರ ಸ್ವಾಮಿ ಮೃತ್ತಿಕಾ ಬೃಂದಾವನ ಪ್ರತಿಷ್ಠಾಪನೆ ಸಂಭ್ರಮ

​ಪ್ರಜಾವಾಣಿ ವಾರ್ತೆ
Published 13 ಜೂನ್ 2025, 14:43 IST
Last Updated 13 ಜೂನ್ 2025, 14:43 IST
ತೇರದಾಳದಲ್ಲಿ ನಿರ್ಮಾಣವಾದ ನೂತನ ರಾಘವೇಂದ್ರ ಶ್ರೀಮಠದ ಮೃತ್ತಿಕಾ ಬೃಂದಾವನ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಆಗಮಿಸಿದ ಮಂತ್ರಾಲಯ ಶ್ರೀ ಪೀಠದ ಪೀಠಾಧಿಪತಿ ಸುಬುಧೇಂದ್ರತೀರ್ಥ ಸ್ವಾಮೀಜಿ ಅವರನ್ನು  ಪೂರ್ಣಕುಂಭದೊಂದಿಗೆ ಬರಮಾಡಿಕೊಳ್ಳಲಾಯಿತು.
ತೇರದಾಳದಲ್ಲಿ ನಿರ್ಮಾಣವಾದ ನೂತನ ರಾಘವೇಂದ್ರ ಶ್ರೀಮಠದ ಮೃತ್ತಿಕಾ ಬೃಂದಾವನ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಆಗಮಿಸಿದ ಮಂತ್ರಾಲಯ ಶ್ರೀ ಪೀಠದ ಪೀಠಾಧಿಪತಿ ಸುಬುಧೇಂದ್ರತೀರ್ಥ ಸ್ವಾಮೀಜಿ ಅವರನ್ನು  ಪೂರ್ಣಕುಂಭದೊಂದಿಗೆ ಬರಮಾಡಿಕೊಳ್ಳಲಾಯಿತು.   

ತೇರದಾಳ: ಪಟ್ಟಣದಲ್ಲಿ ನೂತನವಾಗಿ ನಿರ್ಮಿಸಲಾದ ಗುರು ರಾಘವೇಂದ್ರ ಸ್ವಾಮಿ ಶ್ರೀಮಠ ಹಾಗೂ ಮೂಲಮೃತ್ತಿಕಾ ಬೃಂದಾವನದ ಪ್ರತಿಷ್ಠಾಪನೆ ಕಾರ್ಯಕ್ರಮ ಶುಕ್ರವಾರ ಅತ್ಯಂತ ಶ್ರದ್ಧೆ ಹಾಗೂ ಭಕ್ತಿ ಭಾವದಿಂದ ಜರುಗಿತು. ಮಂತ್ರಾಲಯ ರಾಘವೇಂದ್ರ ಶ್ರೀಗಳ ಮೂಲ ಸಂಸ್ಥಾನ ಮಠದ ಪೀಠಾಧಿಪತಿ ಸುಬುಧೇಂದ್ರತೀರ್ಥ ಸ್ವಾಮೀಜಿ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿದ್ದರು.

ಪುರಪ್ರವೇಶ ಮಾಡಿದ ಸ್ವಾಮೀಜಿ ಅವರನ್ನು ಮಹಿಳೆಯರ ಪೂರ್ಣಕುಂಭದೊಂದಿಗೆ ಶೋಭಾಯಾತ್ರೆ ಮೂಲಕ ಶ್ರೀಮಠಕ್ಕೆ ಕರೆತರಲಾಯಿತು. ಭಕ್ತರ ವೇದಘೋಷ, ಕಲಾತಂಡಗಳು ಶೋಭಾಯಾತ್ರೆಗೆ ಮೆರುಗು ನೀಡಿದವು. ಬಳಿಕ ಅವರು ಪ್ರತಿಷ್ಟಾಂಗ ಕಲಶಸ್ಥಾಪನೆ, ಷೋಡಶೋಪಚಾರ ಪೂಜೆ, ಬೃಂದಾವನಕ್ಕೆ ಕಲಶಾಭಿಷೇಕ, ಪ್ರಾಣಪ್ರತಿಷ್ಠಾಪನೆ ಸೇರಿದಂತೆ ಹಲವು ಧಾರ್ಮಿಕ ವಿಧಿವಿಧಾನಗಳು ಜರುಗಿದವು.

ಪಂಚಾಮೃತಾಭಿಷೇಕ, ಮಂಗಳಾರತಿ ಕೂಡ ಜರುಗಿದವು. ಪಟ್ಟಣ ಸೇರಿದಂತೆ ರಾಜ್ಯದ ವಿವಿಧ ಕಡೆಯಿಂದ ಹಾಗೂ ಮಹಾರಾಷ್ಟ್ರದಿಂದ ಆಗಮಿಸಿದ ವಿಪ್ರ ಸಮಾಜದ ಬಾಂಧವರು ಭಾಗವಹಿಸಿದ್ದರು. ಭಕ್ತರಿಗೆ ಅನ್ನಪ್ರಸಾದ ವಿತರಣೆಯಾಯಿತು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.