ರಬಕವಿ ಬನಹಟ್ಟಿ: ವೀರರಾಣಿ ಕಿತ್ತೂರ ಚನ್ನಮ್ಮ ಕನ್ನಡಿಗರ ಧೈರ್ಯ, ಸಾಹಸ ಮತ್ತು ಸ್ವಾಭಿಮಾನದ ಸಂಕೇತ. ಚನ್ನಮ್ಮರ ತತ್ವ, ಆದರ್ಶಗಳನ್ನು ನಾವೆಲ್ಲರೂ ಆಳವಡಿಸಿಕೊಳ್ಳಬೇಕು ಎಂದು ಪೌರಾಯುಕ್ತ ಶ್ರೀನಿವಾಸ ಜಾಧವ ತಿಳಿಸಿದರು.
ಅವರು ಶುಕ್ರವಾರ ಸ್ಥಳೀಯ ನಗರಸಭೆಯ ಸಭಾ ಭವನದಲ್ಲಿ ವೀರರಾಣಿ ಕಿತ್ತೂರ ಚನ್ನಮ್ಮರ ಜಯಂತ್ಯುತ್ಸವದಲ್ಲಿ ಮಾತನಾಡಿದರು. ಅವರು ಬ್ರಿಟಿಷರ ವಿರುದ್ಧ ಹೋರಾಡಿ ಅಜರಾಮರಾಗಿದ್ದಾರೆ ಎಂದು ತಿಳಿಸಿದರು. ಬಿ.ಎಂ. ಡಾಂಗೆ, ಬಸವರಾಜ ಶರಣಪ್ಪನವರ, ಎಂ.ಎಂ.ಮುಗಳಖೋಡ, ಸಿಕಂದರ್ ಕಲಬುರ್ಗಿ, ಸುರೇಶ ಪರಕಾಳೆ, ಅಭಿನಂದನ ಸೋನಾರ, ರಮೇಶ ಮಳ್ಳಿ, ರಾಜಕುಮಾರ ಹೊಸೂರ, ಸಂಗೀತಾ ಕೋಳಿ, ಮುಖೇಶ ಬನಹಟ್ಟಿ ಸೇರಿದಂತೆ ಅನೇಕರು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.