ADVERTISEMENT

ಬೆಳಗಾವಿಯಲ್ಲಿ ರೆಮ್‌ಡಿಸಿವಿರ್ ಘಟಕ: ಮುರುಗೇಶ ನಿರಾಣಿ

​ಪ್ರಜಾವಾಣಿ ವಾರ್ತೆ
Published 29 ಏಪ್ರಿಲ್ 2021, 21:44 IST
Last Updated 29 ಏಪ್ರಿಲ್ 2021, 21:44 IST
ಮುರುಗೇಶ ನಿರಾಣಿ
ಮುರುಗೇಶ ನಿರಾಣಿ   

ಬಾಗಲಕೋಟೆ: ‘ಬೆಳಗಾವಿ ನಗರದಲ್ಲಿ ರೆಮ್‌ಡಿಸಿವಿರ್ ಚುಚ್ಚುಮದ್ದು ತಯಾರಿಕೆ ಘಟಕ ಶೀಘ್ರ ಆರಂಭವಾಗಲಿದೆ’ ಎಂದು ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ ನಿರಾಣಿ ತಿಳಿಸಿದರು.

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಧೋಳದ ಸತೀಶ ಗಾರಗಿ ಅವರಿಗೆ ಬೆಳಗಾವಿಯಲ್ಲಿ ರೆಮ್‌ಡಿಸಿವಿರ್ ತಯಾರಿಸುವ ಘಟಕ ಸ್ಥಾಪನೆಗೆ ಕೇಂದ್ರ ಸರ್ಕಾರದಿಂದ ಅನುಮತಿ ದೊರೆತಿದೆ. ಮುಂದಿನ ದಿನಗಳಲ್ಲಿ ಬೆಳಗಾವಿಯಿಂದಲೇ ಜಿಲ್ಲೆಗೆ ಚುಚ್ಚುಮದ್ದು ಪೂರೈಕೆಯಾಗಲಿದೆ. ಮುಂದಿನ 20ರಿಂದ 30 ದಿನಗಳಲ್ಲಿ ಚುಚ್ಚುಮದ್ದು ತಯಾರಿಕೆ ಕಾರ್ಯ ಪ್ರಾರಂಭವಾಗಲಿದೆ. ಇದರಿಂದು ರಾಜ್ಯದಲ್ಲಿ ರೆಮ್‌ಡೆಸಿವಿರ್ ಕೊರತೆ ನೀಗಲಿದೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT