ADVERTISEMENT

ಪಡಿತರ ಅಕ್ಕಿ ಅಕ್ರಮ ಸಾಗಣೆ: ಬಂಧನ

​ಪ್ರಜಾವಾಣಿ ವಾರ್ತೆ
Published 21 ಡಿಸೆಂಬರ್ 2021, 5:37 IST
Last Updated 21 ಡಿಸೆಂಬರ್ 2021, 5:37 IST
ಅಧಿಕಾರಿಗಳು ವಶಪಡಿಸಿಕೊಂಡಿರುವ ಅಕ್ಕಿ ಅಕ್ರಮ ಸಾಗಣೆ ವಾಹನ ಮತ್ತು ಅಕ್ಕಿ
ಅಧಿಕಾರಿಗಳು ವಶಪಡಿಸಿಕೊಂಡಿರುವ ಅಕ್ಕಿ ಅಕ್ರಮ ಸಾಗಣೆ ವಾಹನ ಮತ್ತು ಅಕ್ಕಿ   

ಕೆರೂರ: ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಬಾದಾಮಿಯ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.

ಬಾಗಲಕೋಟೆ ನವನಗರದ ಮಹಮ್ಮದ ಗೌಸ ಹುನಗುಂದ ಮತ್ತು ಅನ್ನಿಸಾ ಅತ್ತಾರ ಬಂಧಿತರು. ₹ 14,865 ಬೆಲೆಯ 675 ಕ್ವಿಂಟಲ್ ಅಕ್ಕಿ ಹಾಗೂ ವಾಹನ ವಶಪಡಿಸಿಕೊಂಡಿದ್ದಾರೆ. ಪಡಿತರ ಅಕ್ಕಿ ಸಾಗಣೆ ಲೈಸೆನ್ಸ್ ಇದೆ ಎಂದು ಸ್ಥಳೀಯರನ್ನು ನಂಬಿಸಿ ಅವರು ಅಕ್ರಮವಾಗಿ ಸಾಗಣೆ ಮಾಡುತ್ತಿದ್ದರು.

ಶಿರಸ್ತೇದಾರ್ ಗುರುಮೂರ್ತಿ ಸಬನಿಸ್ ಮತ್ತು ಮಂಜುನಾಥ ರೊಟ್ಟಿ ದಾಳಿ ನಡೆಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.