ಬಾಗಲಕೋಟೆ: ಬಳ್ಳಾರಿ ಕಾಂಗ್ರೆಸ್ನಲ್ಲಿ ಯಾವುದೇ ಭಿನ್ನಮತವಿಲ್ಲ, ಎಲ್ಲಾ ವಿಚಾರ ಮಾಡಿಯೇ ಉಗ್ರಪ್ಪ ಅವರನ್ನು ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಲಾಗಿದೆ ಎಂದು ಬಾದಾಮಿ ಶಾಸಕ ಸಿದ್ದರಾಮಯ್ಯ ಹೇಳಿದರು.
ಜಮಖಂಡಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಬಳ್ಳಾರಿಯಲ್ಲಿ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಯಾರಿಗೂ ಅಸಮಾಧಾನವಿಲ್ಲ.ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡ್ತಾರೆ, ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಲಿದ್ದಾರೆ’ ಎಂದರು.
ಮಧ್ಯಾಹ್ನ ಕಾಂಗ್ರೆಸ್ಗೆ ಶಾಕ್ ಕಾದಿದೆ ಎಂದು ಬಿಜೆಪಿ ರಾಜ್ಯಘಟಕದ ಅಧ್ಯಕ್ಷ ಯಡಿಯೂರಪ್ಪ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ,
‘ಯಡಿಯೂರಪ್ಪ ಒಬ್ಬ ಸುಳ್ಳುಗಾರ, ಏನೂ ಆಗಲ್ಲ. ಅವರಿಗೆ ದೊಡ್ಡ ಶಾಕ್ ಕಾದಿದೆ. ಇಷ್ಟು ದಿನ ಸರ್ಕಾರ ಬೀಳುತ್ತೆ ಅಂತಾ ಹೇಳ್ತಿದ್ರು, ಸರ್ಕಾರ ಬಿತ್ತಾ?’ ಎಂದು ಪ್ರಶ್ನಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.