ADVERTISEMENT

ಬಾಗಲಕೋಟೆ: ಕೋವಿಡ್-19ನಿಂದ ಗುಣಮುಖರಾದ ಆರು ಮಂದಿ ಆಸ್ಪತ್ರೆಯಿಂದ ಬಿಡುಗಡೆ

​ಪ್ರಜಾವಾಣಿ ವಾರ್ತೆ
Published 20 ಮೇ 2020, 8:58 IST
Last Updated 20 ಮೇ 2020, 8:58 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬಾಗಲಕೋಟೆ: ಕೋವಿಡ್-19 ಸೋಂಕಿನಿಂದ ಗುಣಮುಖರಾದ ಬಾದಾಮಿ ತಾಲ್ಲೂಕಿನ ಢಾಣಕ ಶಿರೂರು ಗ್ರಾಮದ ಆರು ಮಂದಿಯನ್ನು ಬುಧವಾರ ಇಲ್ಲಿನ ಜಿಲ್ಲಾ ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಯಿತು.

ಸೋಂಕಿನಿಂದ ಗುಣಮುಖರಾದವರಲ್ಲಿ ಎಂಟು ವರ್ಷದ ಬಾಲಕ, ನಾಲ್ವರು ಮಹಿಳೆಯರು, ಒಬ್ಬ ಪುರುಷ ಸೇರಿದ್ದಾರೆ. ಢಾಣಕ ಶಿರೂರಿನ ಒಟ್ಟು 13 ಮಂದಿ ಕೋವಿಡ್-19 ಸೋಂಕು ದೃಢಪಟ್ಟು ಮೇ 5 ರಂದು ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದರು.

14 ದಿನಗಳ ಚಿಕಿತ್ಸೆಯ ನಂತರ ಎಲ್ಲರ ಗಂಟಲು ದ್ರವದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಅದರಲ್ಲಿ ನೆಗೆಟಿವ್ ಬಂದ ಆರು ಮಂದಿಯನ್ನು ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗಿದೆ. ಫಲಿತಾಂಶ ಪಾಸಿಟಿವ್ ಬಂದಿರುವ ಏಳು ಮಂದಿಗೆ ಚಿಕಿತ್ಸೆ ಮುಂದುವರೆಸಲಾಗಿದೆ.

ADVERTISEMENT

ಜಿಲ್ಲಾ ಆಸ್ಪತ್ರೆ ಸರ್ಜನ್ ಡಾ.ಪ್ರಕಾಶ ಬಿರಾದಾರ ನೇತೃತ್ವದಲ್ಲಿ ವೈದ್ಯರ ತಂಡ ಸ್ಮರಣಿಕೆ, ಪ್ರಮಾಣಪತ್ರ ನೀಡಿ, ಚಪ್ಪಾಳೆ ತಟ್ಟುವ ಮೂಲಕ ಎಲ್ಲರನ್ನು ಬೀಳ್ಕೊಟ್ಟಿತು.

ಜಿಲ್ಲೆಯಲ್ಲಿ ಇಲ್ಲಿಯವರೆಗೆ 76 ಮಂದಿಗೆ ಕೋವಿಡ್-19 ದೃಢಪಟ್ಟಿದೆ. 37 ಮಂದಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. 75 ವರ್ಷದ ವೃದ್ಧರೊಬ್ಬರು ಸಾವಿಗೀಡಾಗಿದ್ದಾರೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.