ಬಾಗಲಕೋಟೆ: ತನ್ನನ್ನು ಕರೆದೊಯ್ದು ಕ್ವಾರೆಂಟೈನ್ಗೆ ಒಳಪಡಿಸಲಿದ್ದಾರೆ ಎಂಬ ಭಯದಲ್ಲಿ ಮುಧೋಳ ತಾಲ್ಲೂಕಿನ ಚಿಕ್ಕೂರಿನಲ್ಲಿ ವ್ಯಕ್ತಿಯೊಬ್ಬರು ಶನಿವಾರ ವಿಷ ಸೇವನೆ ಮಾಡಿದ್ದಾರೆ.
ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆಗೆ ಕೂಲಿ ಕೆಲಸಕ್ಕೆ ಹೋಗಿದ್ದ ತುಕಾರಾಮ್ ಲಮಾಣಿ (40) ವಿಷ ಸೇವಿಸಿದವರು. ತುಕಾರಾಮ್ ಊರಿಗೆ ಮರಳಿ ಬಂದಿರುವ ಸುದ್ದಿ ತಿಳಿದು ಆಶಾ ಕಾರ್ಯಕರ್ತೆ ಅವರ ಮನೆಗೆ ತೆರಳಿ ಮಾಹಿತಿ ಕಲೆ ಹಾಕಿದ್ದರು. ಇನ್ನು ಅಧಿಕಾರಿಗಳು ಬಂದು ತನ್ನನ್ನು ಕ್ವಾರೆಂಟೈನ್ಗೆ ಕರೆದೊಯ್ಯಲಿದ್ದಾರೆ ಎಂದು ಭೀತಿಗೊಳಗಾದ ಅವರು ಮನೆಯಲ್ಲಿಯೇ ಕೀಟನಾಶಕ ಸೇವನೆ ಮಾಡಿದ್ದಾರೆ.
ತಕ್ಷಣ ಮನೆಯವರು ಚಿಕಿತ್ಸೆಗಾಗಿ ಅವರನ್ನು ಬಾಗಲಕೋಟೆಯ ಕುಮಾರೇಶ್ವರ ಆಸ್ಪತ್ರೆಗೆ ದಾಖಲಿಸಿದ್ದಾರೆ. ತುಕಾರಾಮ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.