ಬಾಗಲಕೋಟೆ: ಬಾದಾಮಿ ತಾಲ್ಲೂಕಿನ ಉಗಲವಾಟ ಗ್ರಾಮದಲ್ಲಿ ಭಾನುವಾರ ಕೆರೆಯಲ್ಲಿ ಮುಳುಗಿ ಇಬ್ಬರು ಪುಟ್ಟ ಮಕ್ಕಳು ಸಾವಿಗೀಡಾಗಿದ್ದಾರೆ.
ರಾಮದುರ್ಗ ತಾಲ್ಲೂಕಿನ ಸಂಗಳ ಗ್ರಾಮದ ಮಯಾಕ್ ಕೆರೂರ (7) ಹಾಗೂ ಬಾಗಲಕೋಟೆ ತಾಲ್ಲೂಕಿನ ಸೀಮಿಕೇರಿ ಗ್ರಾಮದ ಅಯಾನ್ ಮುಲ್ಲಾ (6) ಸಾವಿಗೀಡಾದವರು.
ಕೊರೊನಾ ಹಿನ್ನೆಲೆಯಲ್ಲಿ ಶಾಲೆಗೆ ರಜೆ ಇರುವ ಕಾರಣ ಉಗಲವಾಟದಲ್ಲಿನ ಸೋದರ ಮಾವ ಬಾಬುಸಾಬ್ ವಾಲಿಕಾರ ಅವರ ಮನೆಗೆ ಮಕ್ಕಳು ಬಂದಿದ್ದರು. ಆಟವಾಡಲು ಬೆಳಿಗ್ಗೆ ಮನೆಯಿಂದ ಹೊರಗೆ ಹೋಗಿದ್ದರು. ಸಮೀಪದ ಕೆರೆಯಲ್ಲಿ ಅವರ ಶವಗಳು ಪತ್ತೆಯಾಗಿವೆ. ಕೆರೂರು ಸರ್ಕಾರಿ ಆಸ್ಪತ್ರೆಯಲ್ಲಿ ಮಕ್ಕಳ ಶವ ಪರೀಕ್ಷೆ ನಡೆಸಿ ಪೊಲೀಸರಿಗೆ ಒಪ್ಪಿಸಲಾಯಿತು.
ಕೆರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.