ADVERTISEMENT

ಬಾಗಲಕೋಟೆ: ಜಂಬಗಿ ಸೇತುವೆಗೆ ವೀರ ಸಾವರ್ಕರ್ ಹೆಸರು ನಾಮಕರಣ

​ಪ್ರಜಾವಾಣಿ ವಾರ್ತೆ
Published 7 ಜೂನ್ 2020, 13:07 IST
Last Updated 7 ಜೂನ್ 2020, 13:07 IST
ಜಮಖಂಡಿ ತಾಲ್ಲೂಕಿನ ಜಂಬಗಿ ಗ್ರಾಮದ ಬಳಿ ಕೃಷ್ಣಾ ನದಿಗೆ ಕಟ್ಟಲಾಗಿರುವ ಸೇತುವೆಗೆ ಭಾನುವಾರ ವೀರ ಸಾವರ್ಕರ್ ಸೇತುವೆ ಎಂದು ಹೆಸರಿಡಲಾಯಿತು.
ಜಮಖಂಡಿ ತಾಲ್ಲೂಕಿನ ಜಂಬಗಿ ಗ್ರಾಮದ ಬಳಿ ಕೃಷ್ಣಾ ನದಿಗೆ ಕಟ್ಟಲಾಗಿರುವ ಸೇತುವೆಗೆ ಭಾನುವಾರ ವೀರ ಸಾವರ್ಕರ್ ಸೇತುವೆ ಎಂದು ಹೆಸರಿಡಲಾಯಿತು.   

ಬಾಗಲಕೋಟೆ: ಜಮಖಂಡಿ ತಾಲ್ಲೂಕಿನ ಜಂಬಗಿ ಗ್ರಾಮದ ಬಳಿ ಕೃಷ್ಣಾ ನದಿಗೆ ಕಟ್ಟಲಾಗಿರುವ ಸೇತುವೆಗೆ ಭಾನುವಾರ ವೀರ ಸಾವರ್ಕರ್ ಸೇತುವೆ ಎಂದು ಹೆಸರಿಡಲಾಯಿತು.

ಜಮಖಂಡಿಯ ಸಾವರ್ಕರ್ ಪ್ರತಿಷ್ಠಾನದ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸೇತುವೆಗೆ ವೀರ ಸಾವರ್ಕರ್ ಸೇತುವೆ ಎಂದು ಹೆಸರು ಇಡಲಾಯಿತು.

ಈ ವೇಳೆ ವಿಧಾನ ಪರಿಷತ್ ಮಾಜಿ ಸದಸ್ಯ ಹಾಗೂ ಬಿಜೆಪಿ ಮುಖಂಡ ಜಿ.ಎಸ್‌. ನ್ಯಾಮಗೌಡ ಹಾಗೂ ಜಮಖಂಡಿಯ ವೀರ ಸಾವರ್ಕರ್ ಪ್ರತಿಷ್ಠಾನದ ಅಧ್ಯಕ್ಷ ಶೈಲೇಶ್ ಆಪ್ಟೆ ಹಾಗೂ ಸ್ಥಳೀಯ ಬಿಜೆಪಿ ಮುಖಂಡರು ಇದ್ದರು.

ADVERTISEMENT

ಜಂಬಗಿ ಸೇತುವೆಗೆ ವೀರ ಸಾವಕ೯ರ್ ಹೆಸರನ್ನು ಅಧಿಕೃತವಾಗಿ ಘೋಷಿಸುವಂತೆ ಸಮಾರಂಭದಲ್ಲಿ ಪಾಲ್ಗೊಂಡಿದ್ದ ಮುಖಂಡರು ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.