ಬಾಗಲಕೋಟೆ: ಮುಖ್ಯಮಂತ್ರಿ ಯಾರಾಗಬೇಕು ಎಂಬ ಅಭಿಮಾನಿಗಳ ಹೇಳಿಕೆಗೆ ಲಕ್ಷ್ಮಣ ರೇಖೆ ಹಾಕಬೇಕು ಎಂದು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯಿಲಿ ಹೇಳಿದರು.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಆಯ್ಕೆ ಚರ್ಚೆ ಆರೋಗ್ಯಕರವಾಗಿರಬೇಕು. ಪಕ್ಷಕ್ಕೆ ಹಾನಿಯುಂಟು ಮಾಡುವಂತೆ ಇರಬಾರದು ಎಂದರು.
ಕಾಂಗ್ರೆಸ್ ನಲ್ಲಿ ಮುಖ್ಯಮಂತ್ರಿಯಾಗಲು ಬಹಳಷ್ಟು ಅಭ್ಯರ್ಥಿಗಳಿದ್ದಾರೆ. ಅವರಲ್ಲಿ ಎಸ್.ಆರ್. ಪಾಟೀಲರು ಪ್ರಮುಖರು. ಅವರನ್ನು ಮೂಲೆಗುಂಪು ಮಾಡಲು ಸಾಧ್ಯವಿಲ್ಲ ಎಂದು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.