ADVERTISEMENT

ಎಸ್‌.ಆರ್‌. ಪಾಟೀಲ ಮುಖ್ಯಮಂತ್ರಿಯಾಗಲು ಯೋಗ್ಯ ವ್ಯಕ್ತಿ: ವೀರಪ್ಪ ಮೊಯಿಲಿ

​ಪ್ರಜಾವಾಣಿ ವಾರ್ತೆ
Published 31 ಜುಲೈ 2022, 13:08 IST
Last Updated 31 ಜುಲೈ 2022, 13:08 IST
ಎಂ.ವೀರಪ್ಪ ಮೊಯಿಲಿ
ಎಂ.ವೀರಪ್ಪ ಮೊಯಿಲಿ   

ಬಾಗಲಕೋಟೆ: ‘ವಿಧಾನ ಪರಿಷತ್‌ ವಿರೋಧ ಪಕ್ಷದ ಮಾಜಿ ನಾಯಕ ಎಸ್‌.ಆರ್‌. ಪಾಟೀಲ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿಯಾಗಲು ಯೋಗ್ಯ ವ್ಯಕ್ತಿಯಾಗಿದ್ದಾರೆ’ ಎಂದು ಕಾಂಗ್ರೆಸ್‌ ಮುಖಂಡ ಎಂ.ವೀರಪ್ಪ ಮೊಯಿಲಿಅಭಿಪ್ರಾಯ‍ಪಟ್ಟರು.

ಜಿಲ್ಲೆಯ ಬೀಳಗಿ ತಾಲ್ಲೂಕಿನ ಬಾಡಗಂಡಿಯಲ್ಲಿ ಭಾನುವಾರ ನಡೆದ ಎಸ್‌.ಆರ್‌. ಪಾಟೀಲ ಅವರ 74ನೇ ಜನ್ಮ ದಿನ ಅಂಗವಾಗಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಅವರೊಬ್ಬ‌ ಆದರ್ಶ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ನನ್ನ ಮನಸ್ಸು ಹೇಳುತ್ತಿದೆ’ ಎಂದರು.

‘ಪಾಟೀಲ ಅವರು ಪ್ರಾಮಾಣಿಕ, ಸಜ್ಜನಿಕೆಯ ಸಾಕಾರರೂಪವಾಗಿದ್ದಾರೆ. ಅವರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಬೇಕು ಎಂದು ಈ ಹಿಂದೆ ಶಿಫಾರಸು ಮಾಡಿದ್ದೆ’ ಎಂದು ನೆನಪಿಸಿಕೊಂಡರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.