ಬಾಗಲಕೋಟೆ: ಬಿಳಿ ಸಮವಸ್ತ್ರ ಧರಿಸಿ ಬಂದಿಲ್ಲ ಎಂದು ಪಟ್ಟದಕಲ್ಲಿನಲ್ಲಿ ಆಯೋಜಿಸಿರುವ ಯೋಗ ಕಾರ್ಯಕ್ರಮಕ್ಕೆ ಸ್ಥಳೀಯ ನಿವಾಸಿಗಳಿಗೆ ಅವಕಾಶ ನಿರಾಕರಿಸಿದ್ದಕ್ಕೆ ಪ್ರತಿಭಟನೆ ಮಾಡಿದರು.
ಗ್ರಾಮದಲ್ಲಿ ಡಂಗುರ ಹೊಡೆದು ಯೋಗ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ತಿಳಿಸಲಾಗಿತ್ತು. ಆದರೆ, ಈಗ ಬಿಳಿ ಟೀ ಶರ್ಟ್ ಧರಿಸಿ ಬಂದಿಲ್ಲ ಎಂದು ಒಳಗೆ ಬಿಡುತ್ತಿಲ್ಲ ಎಂದು ನಿವಾಸಿ ಮಂಜುನಾಥ ಮತ್ತಿತರರು ದೂರಿದರು.
ಬಿಳಿ ಸಮವಸ್ತ್ರ ಧರಿಸಿ ಬಂದವರನ್ನು ಮಾತ್ರ ಪೊಲೀಸರು ಒಳಗೆ ಬಿಡುತ್ತಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.