ADVERTISEMENT

ಅಧ್ಯಾತ್ಮದ ಅದಮ್ಯ ಚೇತನ ಸ್ವಾಮಿ ವಿವೇಕಾನಂದ:

​ಪ್ರಜಾವಾಣಿ ವಾರ್ತೆ
Published 12 ಜನವರಿ 2024, 15:41 IST
Last Updated 12 ಜನವರಿ 2024, 15:41 IST
ಬಾದಾಮಿ ಸಮೀಪದ ಚೊಳಚಗುಡ್ಡ ಗ್ರಾಮದ ನವಚೇತನ ಶಿಕ್ಷಣ ಸಂಸ್ಥೆಯ ಶಾಕಂಬರಿ ವಿದ್ಯಾನಿಕೇತನ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 161 ನೇ ಸ್ವಾಮಿ ವಿವೇಕಾನಂದ ಜಯಂತಿ ಅಂಗವಾಗಿ ಮಕ್ಕಳು ಸ್ವಾಮಿ ವಿವೇಕಾನಂದರ ಪೋಷಾಕು ಧರಿಸಿ ಗಮನ ಸೆಳೆದರು
ಬಾದಾಮಿ ಸಮೀಪದ ಚೊಳಚಗುಡ್ಡ ಗ್ರಾಮದ ನವಚೇತನ ಶಿಕ್ಷಣ ಸಂಸ್ಥೆಯ ಶಾಕಂಬರಿ ವಿದ್ಯಾನಿಕೇತನ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 161 ನೇ ಸ್ವಾಮಿ ವಿವೇಕಾನಂದ ಜಯಂತಿ ಅಂಗವಾಗಿ ಮಕ್ಕಳು ಸ್ವಾಮಿ ವಿವೇಕಾನಂದರ ಪೋಷಾಕು ಧರಿಸಿ ಗಮನ ಸೆಳೆದರು   

ಚೊಳಚಗುಡ್ಡ (ಬಾದಾಮಿ): ‘ಸ್ವಾಮಿ ವಿವೇಕಾನಂದರು ಭಾರತ ಕಂಡ ಅಧ್ಯಾತ್ಮದ ಅದಮ್ಯ ಚೇತನವಾಗಿದ್ದರು. ಭವಿಷ್ಯದ ಭವ್ಯ ಭಾರತದ ನಿರ್ಮಾಣದ ಸಂಕಲ್ಪ ತೊಟ್ಟ ಸನ್ಯಾಸಿಯಾಗಿದ್ದರು’ ಎಂದು ಪ್ರಾಚಾರ್ಯ ರಮೇಶ ಶಹಬಾದ ಹೇಳಿದರು.

ನವಚೇತನ ಶಿಕ್ಷಣ ಸಂಸ್ಥೆಯ ಶಾಕಂಬರಿ ವಿದ್ಯಾನಿಕೇತನ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ 161ನೇ ಸ್ವಾಮಿ ವಿವೇಕಾನಂದ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ವಿದ್ಯಾರ್ಥಿಗಳು ಸ್ವಾಮಿ ವಿವೇಕಾನಂದರ ಪೋಷಾಕು ಧರಿಸಿ ಸಂಭ್ರಮಿಸಿದರು. ಮುಖ್ಯ ಶಿಕ್ಷಕ ಪ್ರಶಾಂತ ಪಡಿಯಪ್ಪನವರ ಮತ್ತು ಸಿಬ್ಬಂದಿ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.