ADVERTISEMENT

ಸಿದ್ದರಾಮಯ್ಯಗೆ ಅಡ್ಡಗಟ್ಟಿದ ಮಹಿಳೆಯರು: ಮದ್ಯದ ಅಂಗಡಿ ಸ್ಥಳಾಂತರಕ್ಕೆ ಒತ್ತಾಯ

​ಪ್ರಜಾವಾಣಿ ವಾರ್ತೆ
Published 13 ಜುಲೈ 2021, 13:53 IST
Last Updated 13 ಜುಲೈ 2021, 13:53 IST
ಬಾದಾಮಿಯಲ್ಲಿ ಮಂಗಳವಾರ ಶಾಸಕ ಸಿದ್ದರಾಮಯ್ಯ ಅವರಿಗೆ ಮಹಿಳೆಯರು ಮನವಿ ಸಲ್ಲಿಸಿದರು
ಬಾದಾಮಿಯಲ್ಲಿ ಮಂಗಳವಾರ ಶಾಸಕ ಸಿದ್ದರಾಮಯ್ಯ ಅವರಿಗೆ ಮಹಿಳೆಯರು ಮನವಿ ಸಲ್ಲಿಸಿದರು   

ಬಾದಾಮಿ : ಗ್ರಾಮದಲ್ಲಿರುವ ಎಂಎಸ್ಐಎಲ್ ಮದ್ಯದ ಅಂಗಡಿಯನ್ನು ಬೇರೆಡೆಗೆ ಸ್ಥಳಾಂತರ ಮಾಡಬೇಕು ಎಂದು ಆಗ್ರಹಿಸಿ ಸಮೀಪದ ಹೊಸೂರ ಗ್ರಾಮದ ಮಹಿಳೆಯರು ಮಂಗಳವಾರ ಶಾಸಕ ಸಿದ್ದರಾಮಯ್ಯ ಅವರಿಗೆ ಅಡ್ಡಗಟ್ಟಿ ತಡೆದು ಮನವಿ ಸಲ್ಲಿಸಿದರು.

ಸಿದ್ದರಾಮಯ್ಯ ಕಂದಾಯ ಇಲಾಖೆಯ ಆವರಣದಲ್ಲಿ ಮಂಗಳವಾರ ಸಮಾರಂಭ ಮುಗಿಸಿ ವೇದಿಕೆಯಿಂದ ಹೊರಗೆ ಬರುತ್ತಿದ್ದಾಗ ಮಹಿಳೆಯರು ರಸ್ತೆಯಲ್ಲಿ ಕುಳಿತು ಪ್ರತಿಭಟಿಸಿದರು. ನಂತರ ಅವರಿಗೆ ಮುತ್ತಿಗೆ ಹಾಕಿ ಸಮಸ್ಯೆಯನ್ನು ಹೇಳಿದರು.

ಎಂಎಸ್ಐಎಲ್ ಮದ್ಯದ ಅಂಗಡಿಯಿಂದ ಗ್ರಾಮದ ಜನರು ಮತ್ತು ಯುವಕರು ಕೆಟ್ಟ ಹವ್ಯಾಸಕ್ಕೆ ಬಲಿಯಾಗುವರು. ಗ್ರಾಮದಲ್ಲಿ ಮದ್ಯದ ಅಂಗಡಿ ಬೇಡ ಎಂದು ಈಗಾಗಲೇ ಮನವಿ ಸಲ್ಲಿಸಿದ್ದೇವೆ. ಮದ್ಯದ ಅಂಗಡಿಯನ್ನು ಬೇಗ ಬಂದ್ ಮಾಡಿಸಿ ಇಲ್ಲವೇ ನಮಗೆ ವಿಷ ಕೊಡಿ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.