ADVERTISEMENT

ಜಿ.ಪಂ. ಸಿಇಒ ಆಗಿ ಡಾ.ಆಕಾಶ್

​ಪ್ರಜಾವಾಣಿ ವಾರ್ತೆ
Published 19 ಜುಲೈ 2023, 16:23 IST
Last Updated 19 ಜುಲೈ 2023, 16:23 IST
ಡಾ.ಎಸ್.ಆಕಾಶ್
ಡಾ.ಎಸ್.ಆಕಾಶ್   

ಬಾಗಲಕೋಟೆ: ಜಿಲ್ಲೆಯ ಜಿಲ್ಲಾ ಪಂಚಾಯ್ತಿ ನೂತನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಡಾ.ಆಕಾಶ್‌ ಎಸ್‌ ಅವರನ್ನು ವರ್ಗಾವಣೆ ಮಾಡಿ ಆಡಳಿತ ಇಲಾಖೆಯ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.

ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿದ್ದ ಟಿ. ಭೂಬಾಲನ್‌ ಅವರ ಹುದ್ದೆಗೆ ಆಕಾಶ್ ಅವರನ್ನು ವರ್ಗ ಮಾಡಲಾಗಿದೆ. 2019ರ ಐಎಎಸ್‌ ಬ್ಯಾಚಿನ ಅಧಿಕಾರಿಯಾಗಿದ್ದು, ಕೊಡಗಿನ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿಯಾಗಿದ್ದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT