ADVERTISEMENT

ಅಂಬೇಡ್ಕರ್ ಜಯಂತಿ: ಸರಳ ಆಚರಣೆಗೆ ನಿರ್ಧಾರ

​ಪ್ರಜಾವಾಣಿ ವಾರ್ತೆ
Published 11 ಏಪ್ರಿಲ್ 2018, 9:10 IST
Last Updated 11 ಏಪ್ರಿಲ್ 2018, 9:10 IST

ಕುರುಗೋಡು: ‘ಚುನಾವಣೆ ಮಾದರಿ ನೀತಿ ಸಂಹಿತೆ ಜಾರಿಯಲ್ಲಿ ಇರುವುದರಿಂದ ಜನರನ್ನು ಗುಂಪು ಸೇರಿಸಿ ಯಾವುದೇ ಸಭೆ ಸಮಾರಂಭಗಳನ್ನು ಮಾಡುವಂತಿಲ್ಲ. ಹೀಗಾಗಿ ಏಪ್ರಿಲ್ 14ರಂದು ಜರುಗುವ ಅಂಬೇಡ್ಕರ್ ಜಯಂತಿಯನ್ನು ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಸರಳವಾಗಿ ಆಚರಿಸಬೇಕು’ ಎಂದು ತಹಶೀಲ್ದಾರ್‌ ವಿ.ಆರ್‌.ಗೌಡ ಸೂಚಿಸಿದರು.

ಅಂಬೇಡ್ಕರ್‌ ಜಯಂತಿ ಆಚರಣೆ ಕುರಿತು ಮಂಗಳವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.ಉಪ ತಹಶೀಲ್ದಾರ್ ಶಾಶಾವಲಿ, ಪುರಸಭೆ ಮುಖ್ಯಾಧಿಕಾರಿ ಡಿ.ಬಿ. ಈರಣ್ಣ, ಗ್ರಾಮ ಲೆಕ್ಕಾಧಿಕಾರಿ ಕೊಟ್ರೇಶ್ ನಾಯಕ್ ಮತ್ತು ಎಚ್. ಹುಸೇನ್ ಬಾಷಾ, ವಿವಿಧ ಸಂಘ–ಸಂಸ್ಥೆಗಳ ಮುಖಂಡರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT