ADVERTISEMENT

ಕ್ಷೇತ್ರ ಸಂಚಾರ ಆರಂಭಿಸಿ ಗವಿಯಪ್ಪ

​ಪ್ರಜಾವಾಣಿ ವಾರ್ತೆ
Published 27 ಮಾರ್ಚ್ 2018, 8:00 IST
Last Updated 27 ಮಾರ್ಚ್ 2018, 8:00 IST
ಹೊಸಪೇಟೆ ತಾಲ್ಲೂಕಿನ ಬುಕ್ಕಸಾಗರದಲ್ಲಿ ಬಿಜೆಪಿ ಮುಖಂಡ ಎಚ್‌.ಆರ್‌.ಗವಿಯಪ್ಪ ಸೋಮವಾರದಿಂದ ಪಾದಯಾತ್ರೆ ಆರಂಭಿಸಿದರು
ಹೊಸಪೇಟೆ ತಾಲ್ಲೂಕಿನ ಬುಕ್ಕಸಾಗರದಲ್ಲಿ ಬಿಜೆಪಿ ಮುಖಂಡ ಎಚ್‌.ಆರ್‌.ಗವಿಯಪ್ಪ ಸೋಮವಾರದಿಂದ ಪಾದಯಾತ್ರೆ ಆರಂಭಿಸಿದರು   

ಹೊಸಪೇಟೆ: ವಿಜಯನಗರ ವಿಧಾನಸಭಾ ಕ್ಷೇತ್ರದ ಮತದಾರರ ಕುಂದುಕೊರತೆಗಳನ್ನು ಆಲಿಸಲು ಬಿಜೆಪಿ ಪಕ್ಷದ ಮುಖಂಡ ಎಚ್.ಆರ್.ಗವಿಯಪ್ಪ ಹಮ್ಮಿಕೊಂಡಿರುವ ಪಾದಯಾತ್ರೆಗೆ ಸೋಮವಾರ ತಾಲ್ಲೂಕಿನ ಬುಕ್ಕಸಾಗರದಲ್ಲಿ ಚಾಲನೆ ನೀಡಲಾಯಿತು.

ಈ ವೇಳೆ ಮಾತನಾಡಿದ ಗವಿಯಪ್ಪ, ‘ವಿಧಾನಸಭಾ ಕ್ಷೇತ್ರದ ಎಲ್ಲ ಗ್ರಾಮಗಳಿಗೆ ಸಂಚರಿಸಿ ಮೂಲ ಸೌಕರ್ಯಗಳ ಪರಿಶೀಲನೆ ಮತ್ತು ಜನರ ಸಮಸ್ಯೆಗಳನ್ನು ಆಲಿಸಲು ಉದ್ದೇಶಿಸಿರುವೆ’ ಎಂದು ತಿಳಿಸಿದರು.

ಅಲ್ಲದೇ ‘ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದು ಖಚಿತ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.