ಬಳ್ಳಾರಿ: ನಗರದ ಕನಕದುರ್ಗಮ್ಮ ದೇವಸ್ಥಾನಕ್ಕೆ ಆಯುಧ ಪೂಜೆ ದಿನವಾದ ಶುಕ್ರವಾರದಂದು ಬಿಜೆಪಿಯ ಮುಖಂಡ ಜನಾರ್ದನ್ ರೆಡ್ಡಿ ಅವರು ಕುಟುಂಬ ಸಮೇತ ಭೇಟಿ ಕೊಟ್ಟು ವಿಶೇಷ ಪೂಜೆಯನ್ನು ಸಲ್ಲಿಸಿದರು.
ಬಳಿಕ ಮಾತನಾಡಿ, ‘ದೇವಿ ದರ್ಶನದಿಂದ ಶಕ್ತಿ ಮತ್ತು ಚೈತನ್ಯ ಬಂದಿದೆ. ನ್ಯಾಯಾಂಗದ ಮೇಲೆ ವಿಶ್ವಾಸವಿದ್ದು, ಮುಂದಿನ ದಿನಗಳಲ್ಲಿ ಜಯ ಸಿಗಲಿದೆ. ಪಕ್ಷದಲ್ಲಿ ತಾವೊಬ್ಬ ಸಾಮಾನ್ಯ ಕಾರ್ಯಕರ್ತ. ಚುನಾವಣೆಯಲ್ಲಿ ಸ್ಪರ್ಧಿಸುವುದು ಪಕ್ಷದ ವರಿಷ್ಠಗೆ ಬಿಟ್ಟ ವಿಚಾರ’ ಎಂದು ಹೇಳಿದರು. ಪತ್ನಿ ಅರುಣಾ ಲಕ್ಷ್ಮೀ, ಮಗಳು ಬ್ರಹ್ಮಿಣಿ, ಮಗ ಕಿರೀಟಿ, ಸಂಸದ ಬಿ.ಶ್ರೀರಾಮುಲು, ಸಂಜಯ್ ಬೆಟಗೇರಿ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.