
ಪ್ರಜಾವಾಣಿ ವಾರ್ತೆಹಗರಿಬೊಮ್ಮನಹಳ್ಳಿ: ಕಳೆದ ಗುರುವಾರ ರಾತ್ರಿ ಸುರಿದ ಆಲಿಕಲ್ಲು ಮಳೆಯಿಂದ, ತಾಲ್ಲೂಕಿನ ಕಡ್ಲಬಾಳು ಗ್ರಾಮದಲ್ಲಿ ಖರೀದಿದಾರರಿಗೆ ನೀಡಲೆಂದು ಕಟಾವು ಮಾಡಲು ಸಜ್ಜಾಗಿದ್ದ 18 ಎಕರೆ ಭತ್ತದ ಬೆಳೆ ಸಂಪೂರ್ಣವಾಗಿ ನಾಶವಾಗಿದ್ದು, ಒಟ್ಟು ರೂ. 5 ಲಕ್ಷ ಮೌಲ್ಯದ ಬೆಳೆ ನಷ್ಟದ ಅಂದಾಜು ಮಾಡಲಾಗಿದೆ.
ಬೆಳೆ ನಾಶದಿಂದ ರೈತರು ಕಂಗಾಲಾಗಿದ್ದು, ಪ್ರಕೃತಿ ವಿಕೋಪ ನಿಧಿ ಅಡಿ ಸೂಕ್ತ ಪರಿಹಾರ ನೀಡಬೇಕು ಎಂದು ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯರಾದ ಆರ್.ವೆಂಕಟೇಶ್ ಮತ್ತು ಎಚ್.ಕೆ. ಗುರುರಾಜ್ ಆಗ್ರಹಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.