ಬಳ್ಳಾರಿ: ಖಾಸಗಿ ಆಸ್ಪತ್ರೆಗಳ ಮೇಲೆ ನಿಯಂತ್ರಣ ಹೇರುವ ಮಸೂದೆ ಜಾರಿಗೊಳಿಸಬಾರದು ಎಂದು ಆಗ್ರಹಿಸಿ ಭಾರತೀಯ ವೈದ್ಯಕೀಯ ಸಂಘ ಕರೆ ನೀಡಿರುವ ಮುಷ್ಕರವು ನಗರದಲ್ಲಿ ಮಂಗಳವಾರ ಎರಡನೇಯ ದಿನಕ್ಕೆ ಕಾಲಿಟ್ಟಿದೆ.
ಇಲ್ಲಿನ ಜಿಲ್ಲಾ ಸರ್ಕಾರಿ ಆಸ್ಪತ್ರೆ ಹಾಗೂ ವಿಮ್ಸ್ ಆಸ್ಪತ್ರೆಗಳು ರೋಗಿಗಳಿಂದ ತುಂಬಿ ತುಳುಕುತ್ತಿತ್ತು. ಖಾಸಗಿ ಆಸ್ಪತ್ರೆಗಳು ಬಂದ್ ಮಾಡಿದ್ದರಿಂದ ಪರದಾಡುವ ಸ್ಥಿತಿ ಮಂಗಳವಾರ ಮುಂದುವರಿಯಿತು.
‘ಖಾಸಗಿ ಆಸ್ಪತ್ರೆಯಲ್ಲಿ ತುರ್ತು ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಬೇಡಿಕೆ ಈಡೇರದಿದ್ದರೇ ಮುಷ್ಕರ ಮುಂದುವರಿಯಲಿದೆ. ಬುಧವಾರ ಇಲ್ಲಿನ ಖಾಸಗಿ ಆಸ್ಪತ್ರೆ ವೈದ್ಯರು ಬೆಳಗಾವಿ ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ ’ ಎಂದು ಭಾರತೀಯ ವೈದ್ಯಕೀಯ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಡಾ.ಕೆ.ಅರುಣಾ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.