ADVERTISEMENT

‘ಹರಪನಹಳ್ಳಿ ಕ್ಷೇತ್ರದ ಸೇವೆಗೆ ಬದ್ಧ’

​ಪ್ರಜಾವಾಣಿ ವಾರ್ತೆ
Published 4 ಅಕ್ಟೋಬರ್ 2017, 5:34 IST
Last Updated 4 ಅಕ್ಟೋಬರ್ 2017, 5:34 IST

ಬಳ್ಳಾರಿ: ‘ಹರಪನಹಳ್ಳಿ ಕ್ಷೇತ್ರದಲ್ಲಿ ಜೀವನಪೂರ್ತಿ ಸೇವೆ ಸಲ್ಲಿಸಲು ಬದ್ಧ’ ಎಂದು ಬಿಜೆಪಿ ಮುಖಂಡ ಜಿ.ಕರುಣಾಕರರೆಡ್ಡಿ ಹೇಳಿದರು. ನಗರದ ತಮ್ಮ ಮನೆಯಲ್ಲಿ ಮಂಗಳವಾರ ಕ್ಷೇತ್ರದ ಉಪ್ಪಾರ ಸಮುದಾಯದ ಬೆಂಬಲಿಗರ ಸಭೆಯಲ್ಲಿ ಮಾತನಾಡಿದ ಅವರು, ‘ಕ್ಷೇತ್ರದ ವಿವಿಧ ಸಮುದಾಯಗಳ ಸುಮಾರು ಹನ್ನೆರಡು ಸಾವಿರ ಮಂದಿ ಮನೆಗೆ ಬಂದು ಕ್ಷೇತ್ರದಲ್ಲಿ ಸ್ಪರ್ಧಿಸುವಂತೆ ಒತ್ತಾಯಿಸಿದ್ದಾರೆ. ಅವರೆಲ್ಲರ ಬೆಂಬಲ ಪಡೆದಿರುವುದು ಧನ್ಯತೆ ಮೂಡಿಸಿದೆ’ ಎಂದರು.

‘2008ರಲ್ಲಿ ಶಾಸಕನಾಗಿ ಆಯ್ಕೆಯಾದ ಬಳಿಕ ಕ್ಷೇತ್ರವನ್ನು ಹಲವು ಬಗೆಯಲ್ಲಿ ಅಭಿವೃದ್ಧಿಗೊಳಿಸಿದ್ದರಿಂದಲೇ ಜನಬೆಂಬಲ ದೊರಕಿದೆ. ಮುಂದಿನ ಚುನಾವಣೆಯಲ್ಲೂ ಬೆಂಬಲವನ್ನು ನಿರೀಕ್ಷಿಸಿರುವೆ’ಎಂದರು.

‘ಕ್ಷೇತ್ರದ ಶಾಸಕ ಎಂ.ಪಿ.ರವೀಂದ್ರ ಹೆಸರಿಗೆ ಮಾತ್ರ ಶಾಸಕರಾಗಿದ್ದಾರೆ. ಅವರು ಕ್ಷೇತ್ರದ ಯಾವುದೇ ಹಳ್ಳಿಗಳಲ್ಲಿ ಸಂಚರಿಸಿಲ್ಲ. ಸುಳ್ಳು ಹೇಳುತ್ತಾ ಕಾಲ ಹರಣ ಮಾಡುತ್ತಿದ್ದಾರೆ. ನನ್ನ ಅವಧಿಯಲ್ಲಿ ಆರಂಭವಾದ ಅಭಿವೃದ್ಧಿ ಕೆಲಸಗಳನ್ನು ಪೂರ್ಣಗೊಳಿಸಲು ಅವರಿಂದ ಆಗುತ್ತಿಲ್ಲ’ ಎಂದು ದೂರಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.