ADVERTISEMENT

ಕ್ರೀಡಾಪಟುಗಳಿಗೆ ಶೇ 2ರಷ್ಟು ಮೀಸಲಾತಿ: ಸಚಿವ ಬಿ. ನಾಗೇಂದ್ರ

ರಾಜ್ಯಮಟ್ಟದ ಯುವಜನೋತ್ಸವಕ್ಕೆ ಚಾಲನೆ

​ಪ್ರಜಾವಾಣಿ ವಾರ್ತೆ
Published 7 ಜನವರಿ 2024, 0:47 IST
Last Updated 7 ಜನವರಿ 2024, 0:47 IST
ಬಳ್ಳಾರಿಯ ವಾಲ್ಮೀಕಿ ಭವನದಲ್ಲಿ ಶನಿವಾರ ನಡೆದ ರಾಜ್ಯಮಟ್ಟದ ಯುವಜನೋತ್ಸವಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಬಿ. ನಾಗೇಂದ್ರ ಡೊಳ್ಳು ಬಾರಿಸುವ ಮೂಲಕ ಚಾಲನೆ ನೀಡಿದರು
ಬಳ್ಳಾರಿಯ ವಾಲ್ಮೀಕಿ ಭವನದಲ್ಲಿ ಶನಿವಾರ ನಡೆದ ರಾಜ್ಯಮಟ್ಟದ ಯುವಜನೋತ್ಸವಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಬಿ. ನಾಗೇಂದ್ರ ಡೊಳ್ಳು ಬಾರಿಸುವ ಮೂಲಕ ಚಾಲನೆ ನೀಡಿದರು   

ಬಳ್ಳಾರಿ: ರಾಜ್ಯದ ಕ್ರೀಡಾಪಟುಗಳಿಗೆ ಎಲ್ಲ ಇಲಾಖೆಗಳಲ್ಲಿಯೂ ಶೇ 2ರಷ್ಟು ಮೀಸಲಾತಿ ಕಲ್ಪಿಸಲಾಗುವುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಬಿ. ನಾಗೇಂದ್ರ ತಿಳಿಸಿದರು.

ನಗರದ ವಾಲ್ಮೀಕಿ ಭವನದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ವತಿಯಿಂದ ನಡೆಯುತ್ತಿರುವ ರಾಜ್ಯಮಟ್ಟದ ಯುವ ಜನೋತ್ಸವದಲ್ಲಿ ಮಾತನಾಡಿದ ಅವರು, ಜಿಲ್ಲೆಯ ಮಕ್ಕಳಿಗೆ ಅನುಕೂಲವಾಗುವ ರೀತಿಯಲ್ಲಿ ಕ್ರೀಡಾ ಹಾಸ್ಟೆಲ್, ಸುಸಜ್ಜಿತ ಜಿಮ್ ನಿರ್ಮಾಣ ಮಾಡಲಾಗುವುದು ಎಂದರು.

ಯುವಕರು ತಮ್ಮ ಜೀವನದಲ್ಲಿ ಸಂಕಲ್ಪ ಇಟ್ಟುಕೊಳ್ಳಬೇಕು. ಆಗ ಮಾತ್ರ ಸಾಧನೆ ಮಾಡಲು ಸಾಧ್ಯ ಎಂದು ಹೇಳಿದರು.

ADVERTISEMENT

ಶಾಸಕ ನಾರಾ ಭರತ್‍ರೆಡ್ಡಿ ಮಾತನಾಡಿ, ‘ಪಂಜಾಬ್, ಹರಿಯಾಣದಲ್ಲಿ ಕ್ರೀಡಾ ಕೋಟಾದಡಿ ಹೆಚ್ಚು ಉದ್ಯೋಗ ಪಡೆದುಕೊಳ್ಳುತ್ತಿದ್ದು, ಇದು ರಾಜ್ಯದಲ್ಲಿಯೂ ಜಾರಿಯಾಗಬೇಕು’ ಎಂದು ತಿಳಿಸಿದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಯುಕ್ತ ಎನ್. ಶಶಿಕುಮಾರ್, ಪಾಲಿಕೆ ಉಪ ಮೇಯರ್ ಬಿ. ಜಾನಕಿ, ಐಜಿಪಿ ಲೋಕೇಶ್ ಕುಮಾರ್, ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಎಸ್‍ಪಿ ರಂಜಿತ್ ಕುಮಾರ್ ಬಂಡಾರು, ಎಡಿಸಿ ಮಹಮ್ಮದ್ ಜುಬೇರ್, ಉಪ ವಿಭಾಗಾಧಿಕಾರಿ ಹೇಮಂತ್ ಎನ್., ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಕೆ. ಗ್ರೇಸಿ ಇತರರು ಹಾಜರಿದ್ದರು.

ಫೆಬ್ರುವರಿಯಲ್ಲಿ ಬಳ್ಳಾರಿ ಉತ್ಸವ: ಜಿಲ್ಲೆಯ ವೈಭವ ಸಾರುವ ಬಳ್ಳಾರಿ ಉತ್ಸವವನ್ನು ಫೆಬ್ರುವರಿಯಲ್ಲಿ ಅದ್ಧೂರಿಯಾಗಿ  ಆಚರಿಸಲಾಗುವುದು. ಉತ್ಸವಕ್ಕೆ ಮುಖ್ಯಮಂತ್ರಿ ಸಿದ್ದರಾಮತ್ತ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಆಹ್ವಾನಿಸಲಾಗುವುದು ಎಂದು ಸಚಿವ ನಾಗೇಂದ್ರ ಹೇಳಿದರು. 

ಬಳ್ಳಾರಿ ವಾಲ್ಮೀಕಿ ಭವನದಲ್ಲಿ ಶನಿವಾರ ನಡೆದ ರಾಜ್ಯಮಟ್ಟದ ಯುವಜನೋತ್ಸವದಲ್ಲಿ ಸ್ಥಳೀಯ ಕಲಾವಿದರ ತಂಡದ ಡೊಳ್ಳು ಕುಣಿತ ಮನಸೆಳೆಯಿತು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.