ADVERTISEMENT

ಕಾಲೇಜಿಗೆ ₹4.70 ಕೋಟಿ ಅನುದಾನ

​ಪ್ರಜಾವಾಣಿ ವಾರ್ತೆ
Published 8 ಅಕ್ಟೋಬರ್ 2019, 1:40 IST
Last Updated 8 ಅಕ್ಟೋಬರ್ 2019, 1:40 IST
ಹೊಸಪೇಟೆಯ ಶಂಕರ್‌ ಆನಂದ್‌ ಸಿಂಗ್‌ ಕಾಲೇಜಿನಲ್ಲಿ ನೂತನ ಕೊಠಡಿಗಳ ನಿರ್ಮಾಣಕ್ಕೆ ಮಾಜಿ ಶಾಸಕ ರತನ್‌ ಸಿಂಗ್‌ ಗುದ್ದಲಿ ಪೂಜೆ ನೆರವೇರಿಸಿದರು
ಹೊಸಪೇಟೆಯ ಶಂಕರ್‌ ಆನಂದ್‌ ಸಿಂಗ್‌ ಕಾಲೇಜಿನಲ್ಲಿ ನೂತನ ಕೊಠಡಿಗಳ ನಿರ್ಮಾಣಕ್ಕೆ ಮಾಜಿ ಶಾಸಕ ರತನ್‌ ಸಿಂಗ್‌ ಗುದ್ದಲಿ ಪೂಜೆ ನೆರವೇರಿಸಿದರು   

ಹೊಸಪೇಟೆ: ‘ನಗರದ ಶಂಕರ್‌ ಆನಂದ್‌ ಸಿಂಗ್‌ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ₹4.70 ಕೋಟಿ ಹಣ ಮಂಜೂರಾಗಿದೆ’ ಎಂದು ಮಾಜಿ ಶಾಸಕ ರತನ್‌ ಸಿಂಗ್‌ ತಿಳಿಸಿದರು.

ಕಾಲೇಜಿನಲ್ಲಿ ಮೂರನೇ ಹಂತದ ಹೆಚ್ಚುವರಿ ತರಗತಿ ಕೊಠಡಿಗಳ ನಿರ್ಮಾಣ ಕಾಮಗಾರಿಗೆ ಭಾನುವಾರ ಚಾಲನೆ ನೀಡಿ ಮಾತನಾಡಿದ ಅವರು, ‘2018–19ನೇ ಸಾಲಿನಲ್ಲಿ ಈ ಅನುದಾನ ಬಿಡುಗಡೆಯಾಗಿದೆ’ ಎಂದು ಹೇಳಿದರು.

‘ಏಳು ತರಗತಿ ಕೊಠಡಿಗಳು, ಮೂರು ಪ್ರಯೋಗಾಲಯಗಳು, ಒಂದು ಗ್ರಂಥಾಲಯ ಕೊಠಡಿ, ಒಂದು ಶೌಚಾಲಯ ಕೊಠಡಿ, ಒಂದು ವಿದ್ಯಾರ್ಥಿನಿಯರ ವಿಶ್ರಾಂತಿ ಕೊಠಡಿ, ಒಂದು ಆಡಿಟೋರಿಯಂ ನಿರ್ಮಾಣಕ್ಕಾಗಿ ಹಣ ಬಂದಿದ್ದು, ಅದನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು‘ ಎಂದು ತಿಳಿಸಿದರು.

ಕಾಲೇಜಿನ ಪ್ರಾಚಾರ್ಯ ಬಿ.ಜಿ. ಕನಕೇಶಮೂರ್ತಿ, ಪ್ರಾಧ್ಯಾಪಕರಾದ ಟಿ.ಎಚ್‌. ಬಸವರಾಜ, ಪಲ್ಲವ ವೆಂಕಟೇಶ್‌, ನಾಗಣ್ಣ ಕಿಲಾರಿ, ನಾಗವೇಣಿ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.