ADVERTISEMENT

ಪರಿವರ್ತನಾ ರ‍್ಯಾಲಿ: ಸಿದ್ಧತೆಗಳ ಪರಿಶೀಲನೆ

​ಪ್ರಜಾವಾಣಿ ವಾರ್ತೆ
Published 1 ಜನವರಿ 2018, 5:51 IST
Last Updated 1 ಜನವರಿ 2018, 5:51 IST
ಸಿರುಗುಪ್ಪದಲ್ಲಿ ಬಿಜೆಪಿ ಪಕ್ಷದ ಪರಿವರ್ತನಾ ರ್‌್ಯಾಲಿ ಹಾಗೂ ಬಹಿರಂಗ ಸಭೆ ನಡೆಯುವ ತಾಲ್ಲೂಕು ಕ್ರೀಡಾಂಗಣದಲ್ಲಿನ ಸಿದ್ದತೆಗಳನ್ನು ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಶಂಕ್ರಪ್ಪ ಶನಿವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು
ಸಿರುಗುಪ್ಪದಲ್ಲಿ ಬಿಜೆಪಿ ಪಕ್ಷದ ಪರಿವರ್ತನಾ ರ್‌್ಯಾಲಿ ಹಾಗೂ ಬಹಿರಂಗ ಸಭೆ ನಡೆಯುವ ತಾಲ್ಲೂಕು ಕ್ರೀಡಾಂಗಣದಲ್ಲಿನ ಸಿದ್ದತೆಗಳನ್ನು ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಶಂಕ್ರಪ್ಪ ಶನಿವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು   

ಸಿರುಗುಪ್ಪ: ಜನವರಿ 5ರಂದು ಬಿಜೆಪಿ ಪರಿವರ್ತನಾ ರ‍್ಯಾಲಿ ಹಾಗೂ ಬಹಿರಂಗ ಸಭೆ ಹಿನ್ನಲೆಯಲ್ಲಿ ನಗರದ ತಾಲ್ಲೂಕು ಕ್ರೀಡಾಂಗಣದಲ್ಲಿನ ಸಿದ್ಧತೆಗಳನ್ನು ಪಕ್ಷದ ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಶಂಕ್ರಪ್ಪ ಶನಿವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ‘ಯಡಿಯೂರಪ್ಪ ಅವರು ಮಾನವೀಯ ದೃಷ್ಟಿಯಿಂದ ಮಹದಾಯಿ ಸಮಸ್ಯೆ ಇತ್ಯರ್ಥಗೊಳಿಸಲು ಮುಂದಾಗಿದ್ದರು. ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜಕೀಯ ಕುತಂತ್ರದಿಂದ ಬೆಂಗಳೂರಿನ ಪಕ್ಷದ ಕಚೇರಿ ಮುಂದೆ ಹೋರಾಟಗಾರರು ಪ್ರತಿಭಟನೆ ಮಾಡುವಂತಾಯಿತು’ ಎಂದು ಆರೋಪಿಸಿದರು.

‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಷ್ಟ್ರೀಯ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಅವರೊಂದಿಗೆ ಗೋವಾದ ವಿರೋಧಪಕ್ಷ ಕಾಂಗ್ರೆಸ್‌ ನಾಯಕರೊಂದಿಗೆ ಚರ್ಚಿಸಿ ನೀರು ಬಿಡಿಸುವಂತೆ ಮಾಡಬೇಕು’ ಎಂದು ಆಗ್ರಹಿಸಿದರು.

ADVERTISEMENT

ರಾಜ್ಯ ಕಾರ್ಯಕಾರಿಣಿ ಸದಸ್ಯ ಎಂ.ಎಸ್.ಸೋಮಲಿಂಗಪ್ಪ ಮಾತನಾಡಿ, ‘ ರ್‌್ಯಾಲಿಯಲ್ಲಿ 40 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಭಾಗವಹಿಸುವ ನಿರೀಕ್ಷೆ ಇದೆ. 15ಸಾವಿರ ಆಸನಗಳ ಹಾಗೂ ಕುಡಿಯುವ ನೀರು, ಉಪಹಾರ ವ್ಯವಸ್ಥೆ ಮಾಡಲಾಗಿದೆ’ ಎಂದು ಮಾಹಿತಿ ನೀಡಿದರು.

ರಾಜ್ಯ ಕಾರ್ಯದರ್ಶಿ ತುಕರಾಂಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮುರಾರಿಗೌಡ, ಜಿ.ಪಂ.ಸದಸ್ಯರಾದ, ರತ್ನಮ್ಮ ಅಡಿವೆಯ್ಯಸ್ವಾಮಿ, ಕೋಟೇಶ್ವರೆಡ್ಡಿ, ಬಿ.ಜಿ.ರವಿ, ರಾಜ್ಯ ಪರಿಷತ್ ಸದಸ್ಯ ಶಂಕರರೆಡ್ಡಿ, ಬಿಜೆಪಿ ತಾಲ್ಲೂಕು ಅಧ್ಯಕ್ಷ ಕೊಂಚಿಗೇರಿ ನಾಗರಾಜಗೌಡ, ಬಸವರಾಜ, ಪ್ರೇಮಕುಂದರಗಿ, ಮಂಜುಳಾ, ಅಲಮೇಲಮ್ಮ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.