ADVERTISEMENT

ಹಾಸ್ಟೆಲ್‌ ತೆರೆಯಲು ಎಬಿವಿಪಿ ಹಕ್ಕೊತ್ತಾಯ

​ಪ್ರಜಾವಾಣಿ ವಾರ್ತೆ
Published 19 ಜನವರಿ 2021, 11:41 IST
Last Updated 19 ಜನವರಿ 2021, 11:41 IST
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ ಕಾರ್ಯಕರ್ತರು ಮಂಗಳವಾರ ಹೊಸಪೇಟೆ ತಹಶೀಲ್ದಾರ್‌ ಕಚೇರಿ ಎದುರು ಪ್ರತಿಭಟನೆ ನಡೆಸಿದರು
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ ಕಾರ್ಯಕರ್ತರು ಮಂಗಳವಾರ ಹೊಸಪೇಟೆ ತಹಶೀಲ್ದಾರ್‌ ಕಚೇರಿ ಎದುರು ಪ್ರತಿಭಟನೆ ನಡೆಸಿದರು   

ಹೊಸಪೇಟೆ: ಹಾಸ್ಟೆಲ್‌ ತೆರೆಯಬೇಕೆಂದು ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ (ಎಬಿವಿಪಿ) ಕಾರ್ಯಕರ್ತರು ಮಂಗಳವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.

ನಂತರ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪನವರಿಗೆ ಬರೆದ ಮನವಿ ಪತ್ರವನ್ನು ತಹಶೀಲ್ದಾರ್‌ ಎಚ್‌. ವಿಶ್ವನಾಥ್‌ ಅವರಿಗೆ ಸಲ್ಲಿಸಿದರು.

ಅನೇಕ ತಿಂಗಳಿಂದ ಹಾಸ್ಟೆಲ್‌ಗಳು ತೆರೆದಿಲ್ಲ. ಈಗ ಕಾಲೇಜು ಆರಂಭಗೊಂಡಿರುವುದರಿಂದ ಅವುಗಳನ್ನು ತೆರೆಯಬೇಕು. ಇದರಿಂದ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಅನುಕೂಲವಾಗುತ್ತದೆ. ಅದೇ ರೀತಿ ಅರ್ಜಿ ಸಲ್ಲಿಸಿರುವ ಎಲ್ಲ ವಿದ್ಯಾರ್ಥಿಗಳಿಗೆ ತಕ್ಷಣವೇ ವಿದ್ಯಾರ್ಥಿ ವೇತನ ಬಿಡುಗಡೆಗೊಳಿಸಬೇಕು ಎಂದು ಒತ್ತಾಯಿಸಿದರು.

ADVERTISEMENT

ರಾಜ್ಯದ ಅನೇಕ ಕಾಲೇಜುಗಳಲ್ಲಿ ಕಾಯಂ ಉಪನ್ಯಾಸಕರ ಹುದ್ದೆ ಖಾಲಿ ಇವೆ. ಸರ್ಕಾರ ಆದಷ್ಟು ಶೀಘ್ರ ಆ ಹುದ್ದೆಗಳನ್ನು ತುಂಬಬೇಕು. ವೇತನ ಪಾವತಿಸದ ಉಪನ್ಯಾಸಕರಿಗೆ ಆದಷ್ಟು ಶೀಘ್ರ ಕೊಡಬೇಕು ಎಂದು ಆಗ್ರಹಿಸಿದರು.

ಪರಿಷತ್ತಿನ ಅಭಿಜಿತ್, ಪರೀಕ್ಷಿತ್ ದೇಸಾಯಿ, ರೇಣುಕಪ್ಪ ಚೌಡ್ಕಿ,ವೀರೇಶ್, ತನುಜಾ, ಸುನೀತಾ, ಮಹಾಲಕ್ಷ್ಮಿ, ಆನಂದ್, ಚಿದಾನಂದ, ಚೆನ್ನಬಸವ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.