ADVERTISEMENT

ಚಕ್ಕಡಿಗೆ ಬಸ್‌ ಡಿಕ್ಕಿ; ವ್ಯಕ್ತಿ ಸಾವು

​ಪ್ರಜಾವಾಣಿ ವಾರ್ತೆ
Published 3 ಮೇ 2019, 15:02 IST
Last Updated 3 ಮೇ 2019, 15:02 IST

ಹೊಸಪೇಟೆ: ತಾಲ್ಲೂಕಿನ ಗಾಳೆಮ್ಮನಗುಡಿ ಬಳಿ ಶುಕ್ರವಾರ ನಸುಕಿನ ಜಾವ ಚಕ್ಕಡಿಗೆ ಮಿನಿ ಬಸ್‌ ಡಿಕ್ಕಿ ಹೊಡೆದಿದ್ದರಿಂದ ಹಳೆ ಮಲಪನಗುಡಿಯ ರಾಘವೇಂದ್ರ (35) ಮೃತಪಟ್ಟಿದ್ದಾರೆ.

‘ರಾಘವೇಂದ್ರ ಅವರು ಹೊಸ ಮಲಪನಗುಡಿಯಿಂದ ಹಳೆ ಮಲಪನಗುಡಿಗೆ ಹೋಗುವಾಗ ಮಿನಿ ಬಸ್‌ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ತೀವ್ರ ರಕ್ತಸ್ರಾವವಾಗಿ ರಾಘವೇಂದ್ರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬಸ್ಸಿನ ಚಾಲಕನನ್ನು ವಶಕ್ಕೆ ಪಡೆಯಲಾಗಿದೆ’ ಎಂದು ಪೊಲೀಸ್‌ ಅಧಿಕಾರಿ ತಿಳಿಸಿದ್ದಾರೆ.

ಹಂಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.