ADVERTISEMENT

ಆನಂದ್ ಸಿಂಗ್, ಕವಿರಾಜ್ ಮತದಾನ

​ಪ್ರಜಾವಾಣಿ ವಾರ್ತೆ
Published 5 ಡಿಸೆಂಬರ್ 2019, 12:12 IST
Last Updated 5 ಡಿಸೆಂಬರ್ 2019, 12:12 IST
ಆನಂದ್‌ ಸಿಂಗ್‌ ಅವರು ಕುಟುಂಬ ಸದಸ್ಯರೊಂದಿಗೆ ಗುರುವಾರ ಹೊಸಪೇಟೆಯ ಮತಗಟ್ಟೆ ಸಂಖ್ಯೆ 21ರಲ್ಲಿ ಹಕ್ಕು ಚಲಾಯಿಸಿದರು
ಆನಂದ್‌ ಸಿಂಗ್‌ ಅವರು ಕುಟುಂಬ ಸದಸ್ಯರೊಂದಿಗೆ ಗುರುವಾರ ಹೊಸಪೇಟೆಯ ಮತಗಟ್ಟೆ ಸಂಖ್ಯೆ 21ರಲ್ಲಿ ಹಕ್ಕು ಚಲಾಯಿಸಿದರು   

ಹೊಸಪೇಟೆ: ವಿಜಯನಗರ ಕ್ಷೇತ್ರದ ಉಪಚುನಾವಣೆಯಲ್ಲಿ ಗುರುವಾರ ಬಿಜೆಪಿ ಅಭ್ಯರ್ಥಿ ಆನಂದ್‌ ಸಿಂಗ್‌ ಹಾಗೂ ಆ ಪಕ್ಷದ ಬಂಡಾಯ ಅಭ್ಯರ್ಥಿ ಕವಿರಾಜ್‌ ಅರಸ್‌ ಅವರು ಬೆಳಿಗ್ಗೆಯೇ ಮತದಾನ ಮಾಡಿದರು.

ಕಾಂಗ್ರೆಸ್‌ ಅಭ್ಯರ್ಥಿ ವೆಂಕಟರಾವ್‌ ಘೋರ್ಪಡೆ, ಜೆ.ಡಿ.ಎಸ್‌.ನ ಎನ್‌.ಎಂ. ನಬಿ ಅವರು ಈ ಕ್ಷೇತ್ರದ ಮತದಾರರಿಲ್ಲ.

ಸಿಂಗ್‌ ಅವರು ನಗರದ 21ನೇ ಮತಗಟ್ಟೆಯಲ್ಲಿ ತಂದೆ ಪೃಥ್ವಿರಾಜ್ ಸಿಂಗ್, ಪತ್ನಿ ಲಕ್ಷ್ಮಿ ಸಿಂಗ್, ಮಗ ಸಿದ್ಧಾರ್ಥ, ಮಗಳು ವೈಷ್ಣವಿ ಜತೆಗೆ ತೆರಳಿ ಮತ ಹಾಕಿದರು.

ADVERTISEMENT

ಬಿಜೆಪಿ ಬಂಡಾಯ ಅಭ್ಯರ್ಥಿ ಕವಿರಾಜ್ ಅರಸ್ ಅವರು ತಾಲ್ಲೂಕಿನ ಕಲ್ಲಹಳ್ಳಿ ಮತಗಟ್ಟೆ ಸಂಖ್ಯೆ 198ರಲ್ಲಿ ಮತದಾನ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.