ADVERTISEMENT

ಅಂಗನವಾಡಿಗಳಲ್ಲಿ ಎಲ್ಕೆಜಿ, ಯುಕೆಜಿ ಆರಂಭಿಸಲು ಬೆಂಗಳೂರು ಚಲೋ: ಕೆ.ನಾಗರತ್ನಮ್ಮ 

​ಪ್ರಜಾವಾಣಿ ವಾರ್ತೆ
Published 25 ಮೇ 2019, 6:54 IST
Last Updated 25 ಮೇ 2019, 6:54 IST

ಬಳ್ಳಾರಿ: ಅಂಗನವಾಡಿಗಳಲ್ಲೇ ಎಲ್ಕೆಜಿ, ಯುಕೆಜಿ ಆರಂಭಿಸಬೇಕು ಎಂದು ಆಗ್ರಹಿಸಿ ಮೇ 30 ರಂದು ಬೆಂಗಳೂರು ಚಲೋ ಹಮ್ಮಿಕೊಳ್ಳಲಾಗುವುದು ಎಂದು ರಾಜ್ಯ ಅಂಗನವಾಡಿ ನೌಕರರ ಸಂಘದ‌ ಜಿಲ್ಲಾ ಸಮಿತಿಯ ಗೌತವ ಅಧ್ಯಕ್ಷೆ ಕೆ.ನಾಗರತ್ನಮ್ಮ ಮತ್ತು ಪ್ರಧಾನ ಕಾರ್ಯದರ್ಶಿ ಎಂ. ಎರ್ರಮ್ಮ ತಿಳಿಸಿದರು.

ನಗರದಲ್ಲಿ‌ ಶನಿವಾರ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರಿ ಶಾಲೆಗಳನ್ನು ಬಲಗೊಳಿಸಲು ಸರ್ಕಾರ ಕೈಗೊಳ್ಳುತ್ತಿರುವ ನಿರ್ಧಾರದಿಂದ ಅಂಗನವಾಡಿಗಳು ಇನ್ನಷ್ಟು ಶೋಚನೀಯ ಸ್ಥಿತಿಗೆ ತಲುಪುತ್ತವೆ ಎಂದು ಆತಂಕ ವ್ಯಕ್ತಪಡಿಸಿದರು.

' ಪೂರ್ವ ಪ್ರಾಥಮಿಕ ತರಗತಿಗಳನ್ನು ಅಂಗನವಾಡಿಗಳಲ್ಲೇ ಆರಂಭಿಸಿದರೆ ಮಕ್ಕಳು ಸರ್ಕಾರಿ ಶಾಲೆ ಕಡೆಗೆ ಹೋಗುವುದು ತಪ್ಪುತ್ತದೆ. ‌ಇಲ್ಲವಾದರೆ ಅಂಗನವಾಡಿಗಳನ್ನು ಮುಚ್ಚುವಂಥ ಪರಿಸ್ಥಿತಿ ಬಂದು, ಕಾರ್ಯಕರ್ತೆ ಯರು ಮತ್ತು ಸಹಾಯಕಿಯರ ಬದುಕು ಕೂಡ ಅತಂತ್ರವಾಗುತ್ತದೆ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.