ADVERTISEMENT

ವಿಧಾನಸಭಾ ಕ್ಷೇತ್ರಗಳ ಮಾಹಿತಿ ಪಡೆದ ಅರುಣ್‌ ಸಿಂಗ್‌

​ಪ್ರಜಾವಾಣಿ ವಾರ್ತೆ
Published 9 ನವೆಂಬರ್ 2022, 13:03 IST
Last Updated 9 ನವೆಂಬರ್ 2022, 13:03 IST
ಹೊಸಪೇಟೆಯ ತುಂಗಭದ್ರಾ ಜಲಾಶಯದ ‘ವೈಕುಂಠ’ ಅತಿಥಿ ಗೃಹದಲ್ಲಿ ಬುಧವಾರ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್‌ ಅವರನ್ನು ಭೇಟಿಯಾಗಿ ಪಕ್ಷ ಸಂಘಟನೆ ಕುರಿತು ಪಕ್ಷದ ಜಿಲ್ಲಾಧ್ಯಕ್ಷ ಚನ್ನಬಸವನಗೌಡ ಪಾಟೀಲ, ಪ್ರಧಾನ ಕಾರ್ಯದರ್ಶಿ ಕೆ. ರಾಘವೇಂದ್ರ ಮಾಹಿತಿ ನೀಡಿದರು
ಹೊಸಪೇಟೆಯ ತುಂಗಭದ್ರಾ ಜಲಾಶಯದ ‘ವೈಕುಂಠ’ ಅತಿಥಿ ಗೃಹದಲ್ಲಿ ಬುಧವಾರ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್‌ ಅವರನ್ನು ಭೇಟಿಯಾಗಿ ಪಕ್ಷ ಸಂಘಟನೆ ಕುರಿತು ಪಕ್ಷದ ಜಿಲ್ಲಾಧ್ಯಕ್ಷ ಚನ್ನಬಸವನಗೌಡ ಪಾಟೀಲ, ಪ್ರಧಾನ ಕಾರ್ಯದರ್ಶಿ ಕೆ. ರಾಘವೇಂದ್ರ ಮಾಹಿತಿ ನೀಡಿದರು   

ಹೊಸಪೇಟೆ (ವಿಜಯನಗರ): ನಗರದ ತುಂಗಭದ್ರಾ ಜಲಾಶಯದ ‘ವೈಕುಂಠ’ ಅತಿಥಿ ಗೃಹದಲ್ಲಿ ವಾಸ್ತವ್ಯ ಹೂಡಿದ್ದ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್‌ ಅವರು ಬುಧವಾರ ವಿಜಯನಗರ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳ ಮಾಹಿತಿ ಪಡೆದರು.

ವಿಜಯಪುರದಿಂದ ಮಂಗಳವಾರ ರಾತ್ರಿ ‘ವೈಕುಂಠ’ಕ್ಕೆ ಬಂದು ವಾಸ್ತವ್ಯ ಹೂಡಿದ್ದ ಅವರು ಬುಧವಾರ ಪಕ್ಷದ ಜಿಲ್ಲಾಧ್ಯಕ್ಷ ಚನ್ನಬಸವನಗೌಡ ಪಾಟೀಲ ಅವರೊಂದಿಗೆ ಎಲ್ಲ ಕ್ಷೇತ್ರಗಳ ಮಾಹಿತಿ ಪಡೆದುಕೊಂಡರು. ಬೂತ್‌ ಸಶಕ್ತೀಕರಣ, ಪಕ್ಷ ಸಂಘಟನೆ, ಎಸ್ಟಿ ಮೋರ್ಚಾ ಸಮಾವೇಶದ ಸಿದ್ದತೆ ಕುರಿತು ಮಾಹಿತಿ ಪಡೆದರು.

‘ಚುನಾವಣೆಗೆ ಕೆಲವೇ ತಿಂಗಳು ಬಾಕಿ ಉಳಿದಿವೆ. ಪಕ್ಷ ಸಂಘಟನೆಗೆ ಹೆಚ್ಚಿನ ಒತ್ತು ಕೊಡಬೇಕು’ ಎಂದು ಅರುಣ್‌ ಸಿಂಗ್‌ ಸೂಚನೆ ಕೊಟ್ಟರು. ಜಿಲ್ಲಾಧ್ಯಕ್ಷ ಚನ್ನಬಸವನಗೌಡ ಪಾಟೀಲ, ಪ್ರಧಾನ ಕಾರ್ಯದರ್ಶಿ ಕೆ. ರಾಘವೇಂದ್ರ ಇತರರಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.