ADVERTISEMENT

ಸಿಪಿಐ ನಾರಾಯಣಗೆ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 17 ಅಕ್ಟೋಬರ್ 2019, 13:37 IST
Last Updated 17 ಅಕ್ಟೋಬರ್ 2019, 13:37 IST
ವಿ. ನಾರಾಯಣ
ವಿ. ನಾರಾಯಣ   

ಹೊಸಪೇಟೆ: ಇಲ್ಲಿನ ಟಿ.ಬಿ. ಡ್ಯಾಂ ಸಿ.ಪಿ.ಐ. ವಿ. ನಾರಾಯಣ ಅವರು ಶ್ರೀಕೃಷ್ಣದೇವರಾಯ ರಾಜ್ಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

‘ಬಳ್ಳಾರಿಯಲ್ಲಿ ಅ. 20ರಂದು ನಡೆಯಲಿರುವ ಆರನೇ ವಿಜಯನಗರ ಸಾಂಸ್ಕೃತಿಕ ವೈಭವ ಹಾಗೂ ಬೀಚಿ ಸ್ಮರಣೆ ಕಾರ್ಯಕ್ರಮದಲ್ಲಿ ನಾರಾಯಣ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು. ನಾರಾಯಣ ಅವರು ಪೊಲೀಸ್‌ ಇಲಾಖೆಯಲ್ಲಿ ಸಲ್ಲಿಸುತ್ತಿರುವ ಸೇವೆಯನ್ನು ಪರಿಗಣಿಸಿ ಅವರಿಗೆ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ’ ಎಂದು ಕಾರ್ಯಕ್ರಮ ಸಂಘಟನಾ ಸಮಿತಿಯ ಮುಖ್ಯಸ್ಥ ಕೆ. ರಾಮಲಿಂಗ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT