ADVERTISEMENT

ಸಾರಿಗೆ ಸಂಸ್ಥೆ ಚಾಲಕ ಸೋಮನಕಟ್ಟಿಗೆ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 20 ಏಪ್ರಿಲ್ 2023, 16:08 IST
Last Updated 20 ಏಪ್ರಿಲ್ 2023, 16:08 IST
ನವದೆಹಲಿಯಲ್ಲಿ ಇತ್ತೀಚೆಗೆ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಹೂವಿನಹಡಗಲಿ ಘಟಕದ ಚಾಲಕ ಸೋಮನಕಟ್ಟಿ ಅವರಿಗೆ  ಉತ್ತಮ ಚಾಲಕ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಮಾಡಲಾಯಿತು
ನವದೆಹಲಿಯಲ್ಲಿ ಇತ್ತೀಚೆಗೆ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಹೂವಿನಹಡಗಲಿ ಘಟಕದ ಚಾಲಕ ಸೋಮನಕಟ್ಟಿ ಅವರಿಗೆ  ಉತ್ತಮ ಚಾಲಕ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಮಾಡಲಾಯಿತು   

ಹೊಸಪೇಟೆ (ವಿಜಯನಗರ): ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಹೊಸಪೇಟೆ ವಿಭಾಗದ ಹೂವಿನಹಡಗಲಿ ಘಟಕದ ಚಾಲಕ ಸೋಮನಕಟ್ಟಿ ಅವರು ಉತ್ತಮ ಚಾಲಕ ರಾಷ್ಟ್ರೀಯ ಪ್ರಶಸ್ತಿಗೆ ಭಾಜನರಾಗಿದ್ದಾರೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ಕೊಟ್ರಪ್ಪ ತಿಳಿಸಿದ್ದಾರೆ.

‘ಅಸೋಶಿಯನ್ ಆಫ್ ಸ್ಟೇಟ್ ರೋಡ್ ಟ್ರಾನ್ಸ್‌ಪೋರ್ಟ್‌ ಅಂಡರ್‌ಟೇಕಿಂಗ್’ನಿಂದ ನವದೆಹಲಿಯಲ್ಲಿ ಇತ್ತಿಚಿಗೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸೋಮನಕಟ್ಟಿ ಸೇರಿದಂತೆ ದೇಶದ ವಿವಿಧ ಭಾಗಗಳ 42 ಚಾಲಕರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಎಂ.ಎಸ್.ಆರ್.ಟಿ.ಸಿ. ವ್ಯವಸ್ಥಾಪಕ ನಿರ್ದೇಶಕ ಶೇಖರ ಚನ್ನೆ, ಎ.ಎಸ್.ಆರ್.ಟಿ.ಯು. ಉಪ ನಿರ್ದೇಶಕ ರಿತೇಶ ಕುಮಾರ ಗೋಯಲ್, ಅಲ್ಕ ಉಪಾಧ್ಯ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT