ADVERTISEMENT

ಬಳ್ಳಾರಿಯಲ್ಲಿ ಬಿಜೆಪಿ ಕಾರ್ಯಕರ್ತನ ಕೊಲೆ: ಘಟನೆ ಸಿಸಿಟಿವಿಯಲ್ಲಿ ರೆಕಾರ್ಡ್

​ಪ್ರಜಾವಾಣಿ ವಾರ್ತೆ
Published 28 ಸೆಪ್ಟೆಂಬರ್ 2022, 4:38 IST
Last Updated 28 ಸೆಪ್ಟೆಂಬರ್ 2022, 4:38 IST
ಮಂಜುನಾಥ
ಮಂಜುನಾಥ    

ಬಳ್ಳಾರಿ: ಇಲ್ಲಿನ ರೇಡಿಯೊ ಪಾರ್ಕ್ ಬಳಿ ದುಷ್ಕರ್ಮಿಗಳುಯುವಕನೊಬ್ಬನನ್ನುಕೊಲೆ ಮಾಡಿರುವ ಘಟನೆಬುಧವಾರ ಬೆಳಗಿನ ಜಾವ ನಡೆದಿದೆ.

ಕೊಲೆಯಾದ ವ್ಯಕ್ತಿಯನ್ನು ಮಂಜುನಾಥ (35) ಎಂದು ಗುರುತಿಸಲಗಿದೆ.

ಅಕ್ಕಿ ವ್ಯಾಪಾರಿಯಾದ ಈತ ಬಿಜೆಪಿಗೆ ಸೇರಿದವರು ಎನ್ನಲಾಗಿದೆ. ರಾತ್ರಿ 2 ಗಂಟೆ ಸುಮಾರಿಗೆ ಆರೊಪಿಯೊಬ್ಬ ಮಂಜುನಾಥನ ಜತೆ ಹೊಡೆದಾಟ ಆರಂಭಿಸಿದ್ದ. ಮತ್ತೊಬ್ಬ ಆರೊಪಿ ಸೇರಿಕೊಂಡು ಈತನನ್ನುಕೆಳಗೆ ಬೀಳಿಸಿ ಮಾರಕಾಸ್ತ್ರಗಳಿಂದ ಕೊಲೆ ಮಾಡಿ ಕಾರಿನಲ್ಲಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಿ.ಸಿ.ಟಿ.ವಿ ಕ್ಯಾಮರಾದಲ್ಲಿ ಘಟನೆ ರೆಕಾರ್ಡ್ ಆಗಿದೆ. ಆರೋಪಿಗಳು ಕೊಲೆಯಾದ ಯುವಕನ ಸ್ನೇಹಿತರು ಇರಬಹುದು. ಕುಡಿದ ಅಮಲಿನಲ್ಲಿ ದ್ವೇಷದಿಂದ ಕೊಲೆ ಮಾಡಿರಬಹುದು ಎಂದು ಪೊಲೀಸರು ಹೇಳಿದ್ದಾರೆ. ಈ ಕುರಿತುಕೌಲ್ ಬಜಾರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.