ADVERTISEMENT

ರಾಜೀನಾಮೆ: ಸಮಯ ಸಾಧಕತನ -ಮಾಜಿ ಸಚಿವ ಬಸವರಾಜ ರಾಯರಡ್ಡಿ

​ಪ್ರಜಾವಾಣಿ ವಾರ್ತೆ
Published 9 ಜುಲೈ 2019, 18:38 IST
Last Updated 9 ಜುಲೈ 2019, 18:38 IST

ಹೊಸಪೇಟೆ: ‘ಎಲ್ಲರೂ ಮಂತ್ರಿ ಆಗಲು ಸಾಧ್ಯವಿಲ್ಲ. ಮಂತ್ರಿ ಸ್ಥಾನ ಸಿಗದ ಕಾರಣಕ್ಕೆ ಬೇರೆ ಪಕ್ಷಕ್ಕೆ ಹೋಗುತ್ತೇನೆ ಎನ್ನುವುದು ಸಮಯ ಸಾಧಕತನ’ ಎಂದು ಮಾಜಿ ಸಚಿವ ಬಸವರಾಜ ರಾಯರಡ್ಡಿ ಟೀಕಿಸಿದರು.

ಮಂಗಳವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರಾಮಲಿಂಗಾರೆಡ್ಡಿ ಅವರಂತೆ ನಾನೂ ಏಳು ಸಲ ಶಾಸಕನಾಗಿದ್ದೇನೆ. ಸಿದ್ದರಾಮಯ್ಯ ಸರ್ಕಾರದಲ್ಲಿ ಮೂರು ವರ್ಷಗಳ ಬಳಿಕ ನನ್ನನ್ನು ಮಂತ್ರಿ ಮಾಡಿದ್ದರು. ಅಲ್ಲಿಯವರೆಗೆ ತಾಳ್ಮೆಯಿಂದ ಇದ್ದೆ. ಸಚಿವನಾಗಲಿಲ್ಲ ಎಂದು ಪಕ್ಷ ಬಿಡುವ ಮಾತುಗಳನ್ನು ಆಡಿರಲಿಲ್ಲ’ ಎಂದು ಪ್ರತಿಕ್ರಿಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT