ADVERTISEMENT

ಬಳ್ಳಾರಿ| ಉಪನ್ಯಾಸಕಿಗೆ ಲೈಂಗಿಕ ಕಿರುಕುಳ: ಪ್ರಾಂಶುಪಾಲ ಅಮಾನತು

​ಪ್ರಜಾವಾಣಿ ವಾರ್ತೆ
Published 9 ಜೂನ್ 2023, 15:53 IST
Last Updated 9 ಜೂನ್ 2023, 15:53 IST
Sexual harassment.
Sexual harassment.   

ಬಳ್ಳಾರಿ: ಉಪನ್ಯಾಸಕಿಗೆ ಲೈಂಗಿಕ ಕಿರುಕುಳ ನೀಡಿದ ವೀರಶೈವ ವಿದ್ಯಾವರ್ಧಕ ಸಂಘದ ಕಾಲೇಜೊಂದರ  ಪ್ರಾಂಶುಪಾಲರನ್ನು ವಿಚಾರಣೆ ಬಾಕಿ ಉಳಿಸಿ ಅಮಾನತು ಮಾಡುವ ತೀರ್ಮಾನವನ್ನು ಕಾರ್ಯಕಾರಿ ಸಮಿತಿ ಕೈಗೊಂಡಿದೆ.

ಗುರುವಾರ ಸಂಜೆ ತುರ್ತು ಸಭೆ ಸೇರಿದ ಕಾರ್ಯಕಾರಿ ಸಮಿತಿ, ಉಪನ್ಯಾಸಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣ ಕುರಿತು ಸಮಗ್ರವಾಗಿ ಚರ್ಚಿಸಿದ ಬಳಿಕ ಅವರನ್ನು ಅಮಾನತು ಮಾಡುವ ತೀರ್ಮಾನ ಮಾಡಿತು ಎಂದು ವಿದ್ಯಾವರ್ಧಕ ಸಂಘದ ಅಧ್ಯಕ್ಷ ಆರ್‌. ರಾಮನಗೌಡ ‘ಪ್ರಜಾವಾಣಿ’ಗೆ ತಿಳಿಸಿದರು.

ಪ್ರಿನ್ಸಿಪಾಲ್‌ ವಿರುದ್ಧ ಉಪನ್ಯಾಸಕಿ ನಗರದ ಮಹಿಳಾ ಪೊಲೀಸ್‌ ಠಾಣೆಯಲ್ಲಿ ಜೂನ್‌ 5ರಂದು ಲೈಂಗಿಕ ಕಿರುಕುಳದ ಆರೋಪದಡಿ ದೂರು ದಾಖಲಿಸಿದ್ದಾರೆ. ಅಲ್ಲದೆ, ಉಪನ್ಯಾಸಕಿ ಸಂಘದ ಕಚೇರಿಗೂ ದೂರು ನೀಡಿದ ಹಿನ್ನೆಲೆಯಲ್ಲಿ ಅಮಾನತು ನಿರ್ಧಾರ ಕೈಗೊಳ್ಳಲಾಗಿದೆ. ಪ್ರಿನ್ಸಿಪಾಲರಿಗೆ ಅಮಾನತು ಆದೇಶ ರವಾನಿಸಲಾಗಿದೆ ಎಂದು ರಾಮನಗೌಡರು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.