ಬಳ್ಳಾರಿ:'ಎಲ್ಲ ಭಿನ್ನಾಭಿಪ್ರಾಯ ಮರೆತು ಬಿಜೆಪಿಗೆ ಮತ ಕೊಡಲು ಬೋವಿ ಸಮುದಾಯ ನಿರ್ಧರಿಸಿದೆ ಎಂದು ಹೊಳಲ್ಕೆರೆ ಶಾಸಕ ಎಂ.ಚಂದ್ರಪ್ಪ ಮನವಿ ಮಾಡಿದರು.
ನಗರದಲ್ಲಿ ಮಂಗಳವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, 'ಜಿಲ್ಲೆಯ ಮುಖಂಡ ರೊಂದಿಗೆ ಚರ್ಚಿಸಿದ ಬಳಿಕ ಎಲ್ಲರೂ ಬಿಜೆಪಿಗೆ ಮತ ಹಾಕಲು ಒಗ್ಗಟ್ಟಿನಿಂದ ನಿರ್ಧರಿಸಲಾಗಿದೆ' ಎಂದರು.
ಬಿಜೆಪಿ ಅಧಿಕಾರದಲ್ಲಿದ್ದಾಗ ಸಮುದಾಯದ ಐವರನ್ನು ಸಚಿವರನ್ನಾಗಿಸಿತ್ತು. ಸಮಾಜದ ಅಭಿವೃದ್ಧಿ ನಿಗಮ ಸ್ಥಾಪಿಸಿತ್ತು ಎಂದರು.
'ಸಮುದಾಯದ ಒಟ್ಟು 1.70 ಲಕ್ಷ ಮತಗಳು ಬಿಜೆಪಿಗೆ ದೊರಕಲಿವೆ.. ಶಿವಮೊಗ್ಗ ಜಿಲ್ಲೆಯಾದ್ಯಂತ ಸಂಚರಿಸಿ ಸಮುದಾಯವನ್ನು ಒಗ್ಗೂಡಿಸಲಾಗಿದೆ. ಉತ್ತಮ ಸ್ಪಂದನೆ ದೊರೆತಿದೆ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.